ಅರ್ಕಾವತಿ ನದಿಗೆ ತ್ಯಾಜ್ಯ ಸುರಿದವರನ್ನು ಹಿಡಿದು ತರಾಟೆಗೆ ತೆಗೆದುಕೊಂಡ ವಿನೋದ್ ರಾಜ್

Edited By:

Updated on: Nov 11, 2024 | 11:01 PM

ನೆಲಮಂಗಲದಲ್ಲಿನ ತ್ಯಾಜ್ಯ ವಿಲೇವಾರಿ ಮಾಫಿಯಾವನ್ನು ಬಯಲಿಗೆ ಎಳೆಯಲಾಗಿದೆ. ನಟ ವಿನೋದ್​ ರಾಜ್​ ಅವರು ದಂಧೆಕೋರರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾತ್ರೋರಾತ್ರಿ ತ್ಯಾಜ್ಯವನ್ನು ತಂದು ಅರ್ಕಾವತಿ ನದಿಗೆ ಸುರಿಯಲಾಗುತ್ತಿತ್ತು. ಆ ವೇಳೆ ಜನರು ತಡೆದು ನಿಲ್ಲಿಸಿದ್ದಾರೆ. ‘ಇನ್ಮುಂದೆ ಈ ರೀತಿ ಮಾಡಲ್ಲ’ ಎಂದು ತ್ಯಾಜ್ಯ ವಿಲೇವಾರಿ ವಾಹನದ ಚಾಲಕರು ಹೇಳಿದ್ದಾರೆ.

ಬೆಂಗಳೂರು ಹೊರವಲಯದಲ್ಲಿ ಸ್ಯಾನಿಟರಿ ತ್ಯಾಜ್ಯ ವಿಲೇವಾರಿ ಮಾಫಿಯಾ ನಡೆದಿದೆ. ತ್ಯಾಜ್ಯವನ್ನು ನೇರವಾಗಿ ಅರ್ಕಾವತಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಖಾಸಗಿ ವಾಹನ ಮಾಲೀಕರಿಂದ ತ್ಯಾಜ್ಯ ವಿಲೇವಾರಿ ದಂಧೆ ನಡೆಯುತ್ತಿದ್ದು, ಅದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ನಾಗಸಂದ್ರ ಬಳಿಯ ಅರ್ಕಾವತಿ ನದಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದವರನ್ನು ತಡೆದು ನಟ ವಿನೋದ್​ ರಾಜ್​ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನದಿಯ ಮೂಲಕ ತಿಪ್ಪಗೊಂಡನಹಳ್ಳಿ ಕೆರೆಗೆ ಕಲುಷಿತ ನೀರು ಸೇರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More