ಎಲ್ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ವಿನೋದ್ ರಾಜ್ ಅವರು ಮಾನವೀಯತೆ ಮೆರೆದಿದ್ದಾರೆ. ‘ತಾಯಿ ಇದ್ದಿದ್ದರೆ ಇದಕ್ಕಿಂತಲೂ ದೊಡ್ಡ ಸಹಾಯ ಮಾಡುತ್ತಿದ್ದರು. ನನ್ನ ಕೈಯಲ್ಲಿ ಆಗಿದ್ದನ್ನು ಮಾಡಿದ್ದೇನೆ’ ಎಂದು ಅವರು ಈ ವೇಳೆ ಹೇಳಿದರು. ತಮ್ಮ ನೆರವಿಗೆ ಬಂದ ವಿನೋದ್ ರಾಜ್ ಅವರಿಗೆ ಆಟೋ ಚಾಲಕರು ಧನ್ಯವಾದ ತಿಳಿಸಿದರು.
ಇರಾನ್ ಯುದ್ಧದ ಪರಿಣಾಮದಿಂದಾಗಿ ಎಲ್ಪಿಜಿ (LPG) ಅಭಾವ ಉಂಟಾಗಿದೆ. ಆಟೋ ಚಾಲಕರು ಗ್ಯಾಸ್ ಇಲ್ಲದೇ ಪರದಾಡುವಂತಾಗಿದೆ. ಹಾಗಾಗಿ ನಟ ವಿನೋದ್ ರಾಜ್ ಅವರು ಆಟೋ ಚಾಲಕರ ನೆರವಿಗೆ ಬಂದಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ತಾಯಿ, ನಟಿ ಲೀಲಾವತಿ ಸಮಾಧಿ ಬಳಿ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಲಾಗಿದೆ. ತಾಯಿಯ ಹೆಸರಿನಲ್ಲಿ ವಿನೋದ್ ರಾಜ್ (Vinod Raj) ಅವರು ಈ ಕಾರ್ಯ ಮಾಡಿದ್ದಾರೆ. ಈ ವೇಳೆ ಆಟೋ ಚಾಲಕರಿಗೆ ಅವರು ಊಟ ಹಾಕಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ವರದಿ: ಮಂಜುನಾಥ್, ನೆಲಮಂಗಲ
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

