AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಫಾಲ್ಕೆ ಗೌರವ ಪಡೆದ ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು

‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಫಾಲ್ಕೆ ಗೌರವ ಪಡೆದ ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು

ಮಾಲತೇಶ ಜಗ್ಗೀನ್
| Edited By: |

Updated on: Sep 17, 2026 | 5:27 PM

Share

ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಇದು ಕನ್ನಡ ಚಿತ್ರರಂಗಕ್ಕೆ ಸಂಭ್ರಮದ ಸಂಗತಿ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ಟಿವಿ9 ಜತೆ ಮಾತನಾಡಿದ್ದಾರೆ. ಅನಂತ್ ನಾಗ್ ಅವರ ಪ್ರತಿಭೆಯನ್ನು ಜಯಮಾಲಾ ಕೊಂಡಾಡಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಇದು ಕನ್ನಡ ಚಿತ್ರರಂಗಕ್ಕೆ ಸಂಭ್ರಮದ ಸಂಗತಿ ಆಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ, ಹಿರಿಯ ನಟಿ ಜಯಮಾಲಾ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಅನಂತ್ ನಾಗ್ ಅವರ ಪ್ರತಿಭೆಯನ್ನು ಅವರು ಕೊಂಡಾಡಿದ್ದಾರೆ. ‘ಅನಂತ್ ನಾಗ್ ಅವರು ಅದ್ಭುತವಾದ ಕಲಾವಿದರು. ಅವರು ಮಾತನಾಡುವುದೇ ಬೇಡ. ಅವರು ಕಣ್ಣಿನಲ್ಲೇ ಇಡೀ ಕಥೆ ಹೇಳುವ ನಟ. ಅವರಿಗೆ ಈ ಪ್ರಶಸ್ತಿ ಬಂದಿರುವುದು ನಮಗೆಲ್ಲ ಸಂತೋಷ. ಅವರಂಥ ಕಲಾವಿದರನ್ನು ಹೊಂದಿರುವುದು ನಮ್ಮ ಪುಣ್ಯ’ ಎಂದು ಜಯಮಾಲಾ ಅವರು ಹೇಳಿದ್ದಾರೆ. ಮೊದಲು ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದ ಕನ್ನಡ ಚಿತ್ರರಂಗವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಅನಂತ್ ನಾಗ್ ಮತ್ತು ಶಂಕರ್ ನಾಗ್ ಅವರು ಹೇಗೆ ಕಾರಣಕರ್ತರಾದರು ಎಂಬುದನ್ನು ಕೂಡ ಜಯಮಾಲಾ ಅವರು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us