ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ಹಿರಿಯ ನಟಿ ಜಯಮಾಲಾ ಪ್ರತಿಕ್ರಿಯೆ

Updated on: May 29, 2025 | 8:44 PM

‘ಭಾಷೆಯ ವಿಷಯದಲ್ಲಿ ಯಾರೇ ಉದ್ಧಟತನ ಮಾಡಿದರೂ ಕನ್ನಡದ ಮನಸ್ಸುಗಳು ಸುಮ್ಮನೆ ಇರಲ್ಲ. ಕ್ಷಮೆ ಕೊಡುವುದೂ ಗೊತ್ತು, ಮೂಗು ಹಿಡಿದು ದಂಡನೆ ಕೊಡುವುದು ಕೂಡ ಗೊತ್ತು’ ಎಂದು ನಟಿ ಜಯಮಾಲಾ ಅವರು ಹೇಳಿದ್ದಾರೆ. ಕಮಲ್ ಹಾಸನ್ ನೀಡಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಕನ್ನಡದ ಬಗ್ಗೆ ನಟ ಕಮಲ್ ಹಾಸನ್ (Kamal Haasan) ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರ ಬಗ್ಗೆ ನಟಿ ಜಯಮಾಲಾ ಅವರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವರು ಮಾತನಾಡಿದರು. ‘ಭಾಷೆ ಬಗ್ಗೆ ಯಾವುದೇ ರೀತಿಯ ವಿವಾದ ಎದ್ದಾಗ ಕನ್ನಡಿಗರೆಲ್ಲ ಒಂದಾಗುತ್ತೇವೆ, ಒಂದಾಗಲೇಬೇಕು. ಅದು ನಮ್ಮ ಧರ್ಮ. ಕಮಲ್ ಹಾಸನ್ ಅವರು ಹೇಗೆ ಹೇಳಿದರೋ ಗೊತ್ತಿಲ್ಲ. ಆದರೆ ತಮಿಳಿನಿಂದ ಕನ್ನಡ ಹುಟ್ಟಿಲ್ಲ. ಅದಂತೂ ಸತ್ಯ. ನಮ್ಮಲ್ಲಿ ಭಾಷಾ ತಜ್ಞರು ಇದ್ದಾರೆ. ಅವರು ಈ ಬಗ್ಗೆ ಹೇಳಿಕೆ ನೀಡಿ ಮಾರ್ಗದರ್ಶನ ನೀಡಲಿ. ಪ್ರತಿ ಬಾರಿ ಕನ್ನಡಕ್ಕೆ ಧಕ್ಕೆ ಬಂದಾಗ ನಾವು ಮನದಟ್ಟು ಮಾಡಿಕೊಡಬೇಕು’ ಎಂದು ನಟಿ ಜಯಮಾಲಾ (Jayamala) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More