‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು

Updated on: May 07, 2025 | 10:39 AM

ನಟಿ ರಾಗಿಣಿ ದ್ವಿವೇದಿ ಅವರು ಸೋನು ನಿಗಮ್ ನೀಡಿದ ಹೇಳಿಕೆಯ ಬಗ್ಗೆ ಮಾತನಾಡಿದ್ದಾರೆ. ರಾಗಿಣಿ ಅವರು ಬೇರೆ ರಾಜ್ಯದವರು. ಅವರು ಕರ್ನಾಟಕಕ್ಕೆ ಬಂದು ಕನ್ನಡ ಕಲಿತು ಮಾತನಾಡಿದ್ದಾರೆ. ಇಲ್ಲಿಯ ಭಾಷೆಯ ಬಗ್ಗೆ ಸಾಕಷ್ಟು ಗೌರವ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಸೋನು ನಿಗಮ್ (Sonu Nigam) ಅವರ ಹೇಳಿಕೆಯನ್ನು ರಾಗಿಣಿ ಖಂಡಿಸಿದ್ದಾರೆ. ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ‘ಪ್ರೀತಿ, ಸಂಸ್ಕೃತಿ ಹಾಗೂ ಪರಸ್ಪರ ಗೌರವಿಸೋದನ್ನು ನಾನು ನಂಬುತ್ತೇನೆ. ಈ ಮೂರು ವಿಚಾರಗಳ ಬಗ್ಗೆ ಯಾರೂ ಮಾತನಾಡಬಾರದು. ಕರ್ನಾಟಕ ನನ್ನ ಮನೆ. ಭಾಷೆ ಎಲ್ಲರನ್ನೂ ಒಂದುಗೂಡಿಸುತ್ತದೆ. ಎಲ್ಲಿಂದ ಬಂದರೂ ಭಾಷೆ ಹಾಗೂ ಸಂಸ್ಕೃತಿ ಗೌರವಿಸಬೇಕು’ ಎಂದಿದ್ದಾರೆ ರಾಗಿಣಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More