‘ಮಾತು ಬರುತ್ತಿಲ್ಲ, ದರ್ಶನ್ಗಾಗಿ ಪ್ರಾರ್ಥಿಸುತ್ತೇನೆ’; ಆಘಾತ ಹೊರಹಾಕಿದ ಸಂಜನಾ ಗಲ್ರಾನಿ
ನಟಿ ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ದರ್ಶನ್ ಪ್ರಕರಣದಿಂದ ಶಾಕ್ಗೆ ಒಳಗಾಗಿದ್ದಾರೆ. ‘ಇದು ಶಾಕಿಂಗ್ ನ್ಯೂಸ್. ಅವರು ಬಿಡುಗಡೆ ಆಗಲಿ ಎಂದು ಕೇಳಿಕೊಳ್ಳುತ್ತೇನೆ. ಅವರ ಹೆಸರು ಎಫ್ಐಆರ್ನಲ್ಲಿರಬಾರದು ಎಂದು ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.
ನಟ ದರ್ಶನ್ ಅವರು ಅರೆಸ್ಟ್ ಆಗಿರುವುದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್ನಲ್ಲಿ ದರ್ಶನ್ ಕೈವಾಡ ಕೂಡ ಇದೆ ಎನ್ನಲಾಗಿದೆ. ಈ ಪ್ರಕರಣ ಸ್ಯಾಂಡಲ್ವುಡ್ ಮಂದಿಗೆ ಶಾಕಿಂಗ್ ಎನಿಸಿದೆ. ಈ ಬಗ್ಗೆ ನಟಿ ಸಂಜನಾ ಗಲ್ರಾನಿ ವಿಡಿಯೋ ಹಂಚಿಕೊಂಡಿದ್ದಾರೆ. ‘ಈ ಸುದ್ದಿ ನೋಡಿ ಶಾಕ್ ಆಗಿದೆ. ಚಿಂತೆ ಕಾಡ್ತಿದೆ. ದೇವರ ಬಳಿ ಪ್ರೇಯರ್ ಮಾಡ್ತೀನಿ. ಅವರು ಅರೆಸ್ಟ್ ಆಗಬಾರದು. ಇದು ಶಾಕಿಂಗ್ ನ್ಯೂಸ್. ಅವರು ಬಿಡುಗಡೆ ಆಗಲಿ ಎಂದು ಕೇಳಿಕೊಳ್ಳುತ್ತೇನೆ. ಅವರ ಹೆಸರು ಎಫ್ಐಆರ್ನಲ್ಲಿರಬಾರದು ಎಂದು ಕೇಳಿಕೊಳ್ಳುತ್ತೇನೆ. ನನಗೆ ಮಾತೇ ಬರುತ್ತಿಲ್ಲ’ ಎಂದಿದ್ದಾರೆ ಸಂಜನಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 12:16 pm, Tue, 11 June 24
Latest Videos