ಕರ್ನಾಟಕದಲ್ಲೂ I Love ಮೊಹಮ್ಮದ್ ಅಬ್ಬರ​​: ಖಡಕ್ ಎಚ್ಚರಿಕೆ ನೀಡಿದ ಎಡಿಜಿಪಿ

Updated on: Oct 06, 2025 | 6:46 PM

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊತ್ತಿಕೊಂಡ 'ಐ ಲವ್ ಮುಹಮ್ಮದ್' ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದ 4 ಕಡೆ ಲವ್ ಯೂ ಮೊಹಮ್ಮದ್​​ ಘೋಷಣೆ ಮೊಳಗಿದೆ. ಬೆಳಗಾವಿ, ದಾವಣಗೆರೆ, ಆಳಂದ ಸೇರಿ 4 ಕಡೆ ಘಟನೆ ನಡೆದಿದ್ದು, ಘಟನೆ ಸಂಬಂಧ ಈಗಾಗಲೇ ಎರಡು FIR ದಾಖಲಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಪ್ರತಿಕ್ರಿಯಿಸಿದ್ದು, ಖಡಕ್ ಸಂದೇಶ ರವಾನಿಸಿದ್ದಾರೆ

ಬೆಂಗಳೂರು, (ಅಕ್ಟೋಬರ್ 06): ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊತ್ತಿಕೊಂಡ ‘ಐ ಲವ್ ಮುಹಮ್ಮದ್’ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದ 4 ಕಡೆ ಲವ್ ಯೂ ಮೊಹಮ್ಮದ್​​ ಘೋಷಣೆ ಮೊಳಗಿದೆ. ಬೆಳಗಾವಿ, ದಾವಣಗೆರೆ, ಆಳಂದ ಸೇರಿ 4 ಕಡೆ ಘಟನೆ ನಡೆದಿದ್ದು, ಘಟನೆ ಸಂಬಂಧ ಈಗಾಗಲೇ ಎರಡು FIR ದಾಖಲಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯದ 4 ಕಡೆ ಲವ್ ಯೂ ಮೊಹಮ್ಮದ್​​ ಘೋಷಣೆ ಪ್ರಕರಣಗಳು ದಾಖಲಾಗಿವೆ. ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಸಮರ್ಪಕವಾಗಿದೆ. ಅಹಿತಕರ ಘಟನೆಗಳಿಗೆ ಇಲಾಖೆ ಅವಕಾಶ ನೀಡುವುದಿಲ್ಲ.ಕಾನೂನು ಸುವ್ಯವಸ್ಥೆ ಧಕ್ಕೆ ತರಲು ಯತ್ನಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More