AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ ಸಾವಿಗೆ ನ್ಯಾಯ ಕೊಡಿಸಿ: ಎಡಿಜಿಪಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದ ಅಜ್ಜಿ

ಅಂಜಲಿ ಸಾವಿಗೆ ನ್ಯಾಯ ಕೊಡಿಸಿ: ಎಡಿಜಿಪಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದ ಅಜ್ಜಿ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:May 19, 2024 | 10:07 PM

Share

ಹುಬ್ಬಳ್ಳಿಯ ವೀರಾಪುರ ಬಡಾವಣೆಯಲ್ಲಿರುವ ಅಂಜಲಿ ನಿವಾಸಕ್ಕೆ ಇಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್‌.ಹಿತೇಂದ್ರ ಭೇಟಿ ನೀಡಿದರು. ಈ ವೇಳೆ ಅಂಜಲಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಅಜ್ಜಿ ಗಂಗಮ್ಮ ಹಾಗೂ ಸಹೋದರಿಯರು ಮನವಿ ಮಾಡಿದ್ದು, ಆರ್‌.ಹಿತೇಂದ್ರ ಕಾಲಿಗೆ ಬಿದ್ದು ಪೋಷಕರು ಕಣ್ಣೀರು ಹಾಕಿದ್ದಾರೆ. ಆರೋಪಿ ಗಿರೀಶ್‌ಗೆ ಗಲ್ಲು ಶಿಕ್ಷೆಯಾಗಬೇಕು ಎಂದಿದ್ದಾರೆ.

ಹುಬ್ಬಳ್ಳಿ, ಮೇ 19: ನಗರದಲ್ಲಿ ನೇಹಾ ಮತ್ತು ಅಂಜಲಿ ಅಂಬಿಗೇರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಗೆ ಆಗಮಿಸಿದ್ದ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್‌.ಹಿತೇಂದ್ರ (adgp r hitendra) ಸಭೆ ಮಾಡಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ವೀರಾಪುರ ಬಡಾವಣೆಯಲ್ಲಿರುವ ಅಂಜಲಿ (Anjali) ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅಂಜಲಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಅಜ್ಜಿ ಗಂಗಮ್ಮ ಹಾಗೂ ಸಹೋದರಿಯರು ಮನವಿ ಮಾಡಿದ್ದು, ಆರ್‌.ಹಿತೇಂದ್ರ ಕಾಲಿಗೆ ಬಿದ್ದು ಪೋಷಕರು ಕಣ್ಣೀರು ಹಾಕಿದ್ದಾರೆ. ಆರೋಪಿ ಗಿರೀಶ್‌ಗೆ ಗಲ್ಲು ಶಿಕ್ಷೆಯಾಗಬೇಕು ಅಂತಾ ಅಜ್ಜಿ ಮನವಿ ಮಾಡಿದ್ದಾರೆ. ಜೊತೆಗೆ ಸರ್ಕಾರದಿಂದ ನಮಗೆ ಪರಿಹಾರ ಕೊಡಿಸಿ ಮತ್ತು ಸೂಕ್ತವಾದ ಭದ್ರತೆ ನೀಡಿ ಎಂದು ಹೇಳಿದ್ದಾರೆ. ಈ ವೇಳೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರನ್‌, ಧಾರವಾಡ ಎಸ್‌ಪಿ ಡಾ.ಗೋಪಾಲಕೃಷ್ಣ, ಹುಬ್ಬಳ್ಳಿ ಡಿಸಿಪಿ ರವೀಶ್ ಸಾಥ್‌ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 19, 2024 10:06 PM
Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More