ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಫಸ್ಟ್​ ರಿಯಾಕ್ಷನ್​

Edited By:

Updated on: Nov 14, 2025 | 12:00 PM

ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ನಡೆದ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಪ್ರತಿಕ್ರಿಯಿಸಿದ್ದಾರೆ. ಇದು ಪೂರ್ವಯೋಜಿತ ಕೃತ್ಯವಾಗಿದ್ದು, ರೈತರ ಸೋಗಿನಲ್ಲಿ ಕಿಡಿಗೇಡಿಗಳು ಈ ಕಾರ್ಯ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಾಗಲಕೋಟೆ, ನವೆಂಬರ್​ 14:  ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಡೆದ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಹಿತೇಂದ್ರ ಆರ್. ಪ್ರತಿಕ್ರಿಯೆ ನೀಡಿದ್ದಾರೆ. ಕಬ್ಬಿನ ಬೆಲೆ ನಿಗದಿ ಮತ್ತು ಹಳೆ ಬಾಕಿ ಪಾವತಿಗಾಗಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿಗೆ ಐದು ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಅವು ರೈತರು ಹಾಗೂ ಕಾರ್ಮಿಕರಿಗೆ ಸೇರಿದ್ದಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದು, ಪೆಟ್ರೋಲ್ ಕ್ಯಾನ್‌ಗಳನ್ನು ತರಲಾಗಿತ್ತು. ನಿಜವಾದ ರೈತರು ಈ ಕೃತ್ಯ ಎಸಗಿಲ್ಲ. ಬದಲಾಗಿ, ರೈತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More