ಐದು ದಶಕಗಳಿಂದ ರಾಜಕಾರಣದಲ್ಲಿರುವ ಸಿದ್ದರಾಮಯ್ಯ ಮೈಸೂರಲ್ಲಿ ಈಗ ಸ್ವಂತ ಮನೆ ಕಟ್ಟಿಸುತ್ತಿದ್ದಾರೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jul 31, 2023 | 4:34 PM

ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ ಬಳಿಕ ಸಿದ್ದರಾಮಯ್ಯ ತಮ್ಮ ವಿಶ್ರಾಂತಿ ಜೀವನವನ್ನು ಮೈಸೂರಲ್ಲಿ ಕಟ್ಟಿಸುತ್ತಿರುವ ಮನೆಯಲ್ಲಿ ಕಳೆಯಲಿದ್ದಾರೆ.

ಮೈಸೂರು: ಮೈಸೂರು ಜಿಲ್ಲೆಯವರೇ ಅಗಿದ್ದು, ಎರಡನೇ ಬಾರಿ ಮುಖ್ಯಮಂತ್ರಿ ಮತ್ತು ಹಲವು ಬಾರಿ ಶಾಸಕ-ಸಚಿವರಾಗಿದ್ದ ಸಿದ್ದರಾಮಯ್ಯನವರಿಗೆ (Siddaramaiah) ಇದುವರೆಗೆ ನಗರದಲ್ಲಿ ಒಂದು ಸ್ವಂತ ಮನೆಯಿರಲಿಲ್ಲವೆಂದರೆ (own house) ನಂಬ್ತೀರಾ? ಹೌದು, ಮಾರಾಯ್ರೇ ಅವರು ಮೈಸೂರಲ್ಲಿ ತಮ್ಮ ಸ್ನೇಹಿತನಿಗೆ ಸೇರಿದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಆದರೆ ಈಗ ನಗರದ ಕುವೆಂಪು ನಗರ ಬಡಾವಣೆಯ (Kuvempunagar Layout) ವಿಶ್ವಮಾನವ ಜೋಡಿರಸ್ತೆಯಲ್ಲಿ ಅವರೊಂದು ಒಂದು ದೊಡ್ಡ ಬಂಗ್ಲೆ ಕಟ್ಟಿಸುತ್ತಿದ್ದಾರೆ. ಟಿವಿ9 ಕನ್ನಡ ವಾಹಿನಿ ಮೈಸೂರು ವರದಿಗಾರ ಹೇಳುವ ಪ್ರಕಾರ ಕಳೆದ 3 ವರ್ಷಗಳಿಂದ ಕಟ್ಟಡ ನಿರ್ಮಾಣಕಾರ್ಯ ಜಾರಿಯಲ್ಲಿದೆ. ಸೆಲ್ಲರ್ ಜೊತೆ ಎರಡು ಅಂತಸ್ತಿನ ಮನೆಯನ್ನು ಸಿದ್ದರಾಮಯ್ಯ ಕಟ್ಟಿಸುತ್ತಿದ್ದಾರೆ. ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ ಅಂತ ಹೇಳಲಾಗುತ್ತಿದೆಯಾದರೂ ಯಾವಾಗ ಪೂರ್ಣಗೊಳ್ಳುತ್ತದೆ ಅನ್ನೋದರ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ ಬಳಿಕ ಸಿದ್ದರಾಮಯ್ಯ ತಮ್ಮ ವಿಶ್ರಾಂತಿ ಜೀವನವನ್ನು ಈ ಮನೆಯಲ್ಲಿ ಕಳೆಯಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.