ನಿರಂತರ 9 ಗಂಟೆಗಳ ಕಾರ್ಯಾಚರಣೆ ಬಳಿಕ ಕಾಳಿ ನದಿಗೆ ಬಿದ್ದಿದ್ದ ಲಾರಿ ಹೊರಕ್ಕೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೊಡಿಭಾಗ್ ಬಳಿಯ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ್ ಕಲ್ಪಿಸಲು ಕಾಳಿ ನದಿಗೆ ಕಟ್ಟಿರುವ ಸೇತುವೆ ಕಳೆದ ಆಗಸ್ಟ್ 6 ರ ಮಧ್ಯರಾತ್ರಿ ಕುಸಿದಿತ್ತು. ಈ ವೇಳೆ ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ ಕಾರ್ಯಚರಣೆ ಮೂಲಕ ರಕ್ಷಣಾ ಸಿಬ್ಬಂದಿಗಳು ಇಂದು ಮೇಲಕ್ಕೆತ್ತಿದ್ದಾರೆ.
ಕಾರವಾರ, ಆಗಸ್ಟ್ 15: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೊಡಿಬಾಗ್ ಬ್ರಿಡ್ಜ್ (bridge collapse) ಬಳಿ ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ ಕಾರ್ಯಚರಣೆ ಮೂಲಕ ರಕ್ಷಣಾ ಸಿಬ್ಬಂದಿಗಳು ಮೇಲಕ್ಕೆತ್ತಿದ್ದಾರೆ. ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಇಂದು ಬೆಳಿಗ್ಗೆ 9 ಗಂಟೆಯಿಂದ ಐಆರ್ಬಿ ಹಾಗೂ ಜಿಲ್ಲಾಡಳಿತದಿಂದ ಜಂಟಿ ಕಾರ್ಯಾಚರಣೆ ಮಾಡಲಾಗಿದೆ. ಹೀಗಾಗಿ ಸ್ಥಳದಲ್ಲಿ ಪೊಲೀಸರು, ಅಧಿಕಾರಿಗಳು ಬೀಡು ಬಿಟ್ಟಿದ್ದರು. ಆಗಸ್ಟ್ 7ರಂದು ಸೇತುವೆ ಕುಸಿದಾಗ ಕಾಳಿ ನದಿಗೆ ಲಾರಿ ಬಿದ್ದಿತ್ತು. ತಮಿಳುನಾಡು ಮೂಲದ ಸೆಂಥಿಲ್ ಒಡೆತನದ ಲಾರಿಯನ್ನು 2 ಕ್ರೇನ್, 3 ಟೋಯಿಂಗ್ ವೆಹಿಕಲ್, ಈಶ್ವರ ಮಲ್ಪೆ ತಂಡದಿಂದ ಹೊರತೆಗೆಯಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಸೇರಿ 100ಕ್ಕೂ ಜನರ ಪ್ರಯತ್ನ ಸಫಲವಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

