ದಸರಾ ಮಹೋತ್ಸವನ್ನು ಅದ್ದೂರಿಯಾಗಿ ನೆರವೇರಿಸಿದ 14 ಆನೆಗಳು ಇಂದು ವಾಪಸ್ಸು ಕಾಡಿಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Oct 14, 2024 | 3:18 PM

ಆನೆಗಳು ವಾಪಸ್ಸು ಹೋಗುತ್ತಿರುವ ಸುದ್ದಿಕೇಳಿ ಬೆಳಗ್ಗೆ ಅವುಗಳನ್ನು ನೋಡಲು ಬಂದಿದ್ದ ಮಹಿಳೆಯೊಬ್ಬರು ಕಣ್ಣೀರು ಹಾಕಿದರೆಂದು ಅರಣ್ಯಾಧಿಕಾರಿ ಹೇಳಿದರು. ಅನೆಗಳ ನೆನಪಿನ ಶಕ್ತಿ ಬಹಳ ಚೆನ್ನಾಗಿರುವುದರಿಂದ ಅವೆಲ್ಲ ಮೈಸೂರನ್ನು ಮಿಸ್ ಮಾಡಿಕೊಳ್ಳುತ್ತವೆ ಎನ್ನುವ ಪ್ರಭುಗೌಡ 8-10 ದಿನಗಳ ತರುವಾಯ ಅವುಗಳನ್ನು ನೋಡಲು ಹೋಗಲಿದ್ದಾರಂತೆ!

ಮೈಸೂರು: ಸುಮಾರು ಎರಡು ತಿಂಗಳು ಕಾಲ ಮೈಸೂರು ಜನರೊಂದಿಗೆ ಭಾವನಾತ್ಮಕವಾಗಿ ಬೆಸೆದು ಅತ್ಯಂತ ಯಶಸ್ವೀಯಾಗಿ ಜಂಬೂ ಸವಾರಿಯನ್ನು ಪೂರ್ತಿಗೊಳಿಸಿದ ಅಭಿಮನ್ಯು ನೇತೃತ್ವದ 14 ಆನೆಗಳ ಪಡೆ ಇಂದು ವಾಪಸ್ಸು ತಮ್ಮ ಕ್ಯಾಂಪ್​ಗಳಿಗೆ ಹಿಂತಿರುಗುತ್ತಿದೆ. ಆನೆಗಳು ಮರಳಿ ಕಾಡಿಗೆ ಹೋಗುತ್ತಿರೋದು ಡಿಸಿಎಫ್ ಡಾ ಐಬಿ ಪ್ರಭುಗೌಡ ಅವರ ಹೃದಯವನ್ನು ಭಾರವಾಗಿಸಿದೆ. ಆನೆಗಳು ತಮ್ಮ ಶಿಬಿರಗಳಿಗೆ ಹೋದ ಬಳಿಕ ದಿನವಿಡೀ ಅಲ್ಲೇ ಇರುತ್ತಾವಾದರೂ ರಾತ್ರಿ ಸಮಯದಲ್ಲಿ ಮಾತ್ರ ಕಾಡಿಗೆ ಬಿಡಲಾಗುತ್ತದೆ ಎಂದು ಪ್ರಭುಗೌಡ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗಜಪಡೆಯ ಆಗಮನದೊಂದಿಗೆ ಮೈಸೂರಲ್ಲಿ ಶುರುವಾದ ದಸರಾ ಮಹೋತ್ಸವ-2024 ಕಲರವ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.