ಬೆಳಗಾವಿ ವಿಭಜನೆ: ಬೈಲಹೊಂಗಲ ನಿವಾಸಿಗಳ ಆಗ್ರಹದ ಬಳಿಕ ಅಥಣಿಯನ್ನು ಜಿಲ್ಲಾ ಕೇಂದ್ರವಾಗಿಸಬೇಕೆಂಬ ಒತ್ತಾಯ

ಅರುಣ್​ ಕುಮಾರ್​ ಬೆಳ್ಳಿ

Updated on: Aug 21, 2023 | 12:28 PM

ಇವತ್ತು ಅಥಣಿಯ ಜನ ಆಥಣಿಯನ್ನು ಜಿಲ್ಲಾಕೇಂದ್ರ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಕಾಗವಾಡ ಶಾಸಕ ರಾಜು ಕಾಗೆ ಮಾತಾಡಿ ಬಹಳ ವರ್ಷಗಳಿಂದ ಅಥಣಿಗೆ ಜಿಲ್ಲಾಕೇಂದ್ರದ ಸ್ಥಾನಮಾನ ನೀಡಬೇಕೆನ್ನುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಹೇಳಿದರು.

ಬೆಳಗಾವಿ: ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬೆಳಗಾವಿಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿಯನ್ನು ಜಿಲ್ಲಾ ಕೇಂದ್ರಗಳಾಗಿ ಮಾಡುವ ಬಗ್ಗೆ ಇತ್ತೀಚಿಗೆ ಮಾತಾಡಿದ್ದು ವಿವಾದವನ್ನು ಹುಟ್ಟುಹಾಕಿದೆ. ಚಿಕ್ಕೋಡಿ ಮತ್ತು ಗೋಕಾಕ ಹೊರತಾದ ತಾಲ್ಲೂಕುಗಳ ನಿವಾಸಿ ಹಾಗೂ ಜನ ಪ್ರತಿನಿಧಿಗಳು ಸಹ ತಮ್ಮ ತಾಲ್ಲೂಕಿಗೂ ಜಿಲ್ಲಾ ಕೇಂದ್ರ ಸ್ಥಾನಮಾನ ಬೇಕು ಅಂತ ವರಾತ ತೆಗೆದಿದ್ದಾರೆ. ಶನಿವಾರದಂದು ಬೈಲಹೊಂಗಲದ ನಿವಾಸಿಗಳು ತಮ್ಮ ತಾಲೂಕನ್ನು ಜಿಲ್ಲಾಕೇಂದ್ರ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೇಳಿ ಆ ಪ್ರಯತ್ನದಲ್ಲಿ ರಕ್ತಪಾತವಾದರೆ ಅದಕ್ಕೆ ಸರ್ಕಾರವೇ ಹೊಣೆ ಅಂತ ಎಚ್ಚರಿಸಿದ್ದರು. ಇವತ್ತು ಅಥಣಿಯ (Athani) ಜನ ಆಥಣಿಯನ್ನು ಜಿಲ್ಲಾಕೇಂದ್ರ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಕಾಗವಾಡ ಶಾಸಕ ರಾಜು ಕಾಗೆ (Raju Kage) ಮಾತಾಡಿ ಬಹಳ ವರ್ಷಗಳಿಂದ ಅಥಣಿಗೆ ಜಿಲ್ಲಾಕೇಂದ್ರದ ಸ್ಥಾನಮಾನ ನೀಡಬೇಕೆನ್ನುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.