Karnataka Assembly Session: ತನ್ನನ್ನು ಮಿಮಿಕ್ರಿ ಮಾಡಿದ ಯತ್ನಾಳ್​​​ಗೆ ಮೀಟಿಂಗಲ್ಲಿ ಭಾಗಿಯಾಗಿದ್ರಾ ಎಂದು ಕೇಳಿದ ಜಮೀರ್!

ಅರುಣ್​ ಕುಮಾರ್​ ಬೆಳ್ಳಿ

Updated on: Dec 13, 2024 | 7:03 PM

ಧಾರವಾಡದಲ್ಲಿ ವಕ್ಫ್ ಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅಲ್ಲಿನ ಶಾಸಕ ಅರವಿಂದ್ ಬೆಲ್ಲದ್ ಭಾಗಿಯಾಗಿದ್ದರು, ಸಭೆಯಲ್ಲಿ ಏನೆಲ್ಲ ನಡೆಯಿತು ಅನ್ನೋದು ಅವರಿಗೆ ಗೊತ್ತಿದೆ, ಆದರೆ ಅಶೋಕ ಅವರು ಇಲ್ಲಸಲ್ಲದ ಸುಳ್ಳುಗಳನ್ನು ಹೇಳುತ್ತಿದ್ದಾರೆ, ಅಸಲಿಗೆ ಮೀಟಿಂಗ್​ ನಲ್ಲಿ ಏನು ನಡೆಯಿತು ಅಂತ ಅರವಿಂದ್ ಅವರು ಅಶೋಕ್ ಗೆ ಹೇಳಲಿ ಅಂತ ಜಮೀರ್ ಹೇಳಿದಾಗ ಅರವಿಂದ್ ಏನೂ ಗೊತ್ತಾಗದೆ ಸಚಿವನ ಮುಖ ನೋಡುತ್ತಾರೆ.

ಬೆಳಗಾವಿ: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮಾತಾಡುವಾಗ ಮಿಮಿಕ್ರಿಗಳನ್ನು ಹೆಚ್ಚು ಮಾಡುತ್ತಾರೆ. ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಇವತ್ತಿನ ಕಾರ್ಯಕಲಾಪದಲ್ಲಿ ಅವರು ವಕ್ಫ್ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಎದುರೇ ಅವರ ಮಿಮಿಕ್ರಿ ಮಾಡಿ ತೋರಿಸಿದರು. ವಕ್ಫ್ ಭೂವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಜಮೀರ್ ಹೇಗೆ ತಹಸೀಲ್ದಾರ್ ಮತ್ತು ಇತರ ಅಧಿಕಾರಿಗಳನ್ನು ಹೆದರಿಸಿ ರೈತರಿಗೆ ನೋಟೀಸ್​ ಗಳನ್ನು ಮಾಡಿದರು ಅನ್ನೋದನ್ನು ಮಿಮಿಕ್ರಿ ಮಾಡಿದರು. ಅದರೆ, ಜಿಲ್ಲಾಧಿಕಾರಿಗಳ ಆಹ್ವಾನದ ಹೊರತಾಗಿಯೂ ನೀವು ಮೀಟಿಂಗ್​ ಗೆ ಬಂದಿರಲಿಲ್ಲ ಎಂದು ಜಮೀರ್ ಹೇಳಿದಾಗ ಯಾವುದೋ ಊರಿಗೆ ಹೋಗಿದ್ದೆ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಕ್ಫ್​ ಜಟಾಪಟಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಸವಾಲ್ ಹಾಕಿದ ಜಮೀರ್ ಅಹಮ್ಮದ್!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.