Assembly Polls: ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಪ್ರಮುಖ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್​ರಿಂದ ಕ್ಷೇತ್ರ ಪರ್ಯಟನೆ ಆರಂಭ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 10:56 AM

ಆದರೆ, ಭವಾನಿ ಅವರ ಹಿಂದೆ ಇರುವಷ್ಟು ಜನ ಸ್ವರೂಪ್ ಜೊತೆ ಇಲ್ಲ ಅನ್ನೋದು ವಿಡಿಯೋದಲ್ಲಿ ಗೊತ್ತಾಗುತ್ತದೆ. ಭವಾನಿ ಅವರ ಮುಂದಿನ ನಡೆ ಬಗ್ಗೆ ಕುತೂಹಲವಂತೂ ಇದ್ದೇ ಇದೆ.

ಹಾಸನ:  ಬಿರುಗಾಳಿಗೆ ಮೊದಲು ನೀರವತೆ ಆವರಿಸಿರುತ್ತದೆ ಅಂತ ಹೇಳುವುದನ್ನು ನಾವೆಲ್ಲ ಕೇಳಿದ್ದೇವೆ. ಹಾಸನ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಅಂತ ಹಟಕ್ಕೆ ಬಿದಿದ್ದ ಭವಾನಿ ರೇವಣ್ಣ (Bhavani Revanna) ಅವರು ಹೆಚ್ ಡಿ ರೇವಣ್ಣ ಮಧ್ಯಸ್ಥಿತೆ ವಹಿಸಿದ ಬಳಿಕ ಮೌನವಾಗಿರುವುದನ್ನು ನೋಡಿದರೆ ಅಂಥ ಭಾವನೆ ಹುಟ್ಟುತ್ತದೆ. ಏತನ್ಮಧ್ಯೆ, ಹಾಸನ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಮತ್ತು ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಆದ್ಯತೆಯಾಗಿರುವ ಹೆಚ್ ಪಿ ಸ್ವರೂಪ್ (HP Swaroop) ಭವಾನಿ ಸುಮ್ಮನಾಗುತ್ತಿದ್ದಂತೆಯೇ ತಾನೇ ಅಭ್ಯರ್ಥಿ ಅಂತ ಬೀಗುತ್ತಾ ಹಳ್ಳಿಗಳಿಗೆ ಭೇಟಿ ನೀಡಿ ಪಕ್ಷ ಸಂಘಟನೆಯ ಕೆಲಸ ಶುರುವಿಟ್ಟುಕೊಂಡಿದ್ದಾರೆ. ಆದರೆ, ಭವಾನಿ ಅವರ ಹಿಂದೆ ಇರುವಷ್ಟು ಜನ ಸ್ವರೂಪ್ ಜೊತೆ ಇಲ್ಲ ಅನ್ನೋದು ವಿಡಿಯೋದಲ್ಲಿ ಗೊತ್ತಾಗುತ್ತದೆ. ಭವಾನಿ ಅವರ ಮುಂದಿನ ನಡೆ ಬಗ್ಗೆ ಕುತೂಹಲವಂತೂ ಇದ್ದೇ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.