AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ಮೈಸೂರು ದಸರಾ: ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ರಾಮ್​, ಮೈಸೂರು
| Edited By: |

Updated on:Oct 05, 2025 | 1:03 PM

Share

ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ನಾಡಿನಿಂದ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಅದ್ಧೂರಿ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಿ ಕಳುಹಿಸಿಕೊಡಲಾಗಿದೆ. ಇನ್ನು ಕಾಡಿಗೆ ಹೊರಟ ಆನೆಗಳ ಜೊತೆ ಪ್ರವಾಸಿಗರು ಸೆಲ್ಫಿಗೆ ಮುಗಿಬಿದ್ದ ಪ್ರಸಂಗವೂ ನಡೀತು.

ಮೈಸೂರು, ಅಕ್ಟೋಬರ್​ 05: ವಿಶ್ವ ವಿಖ್ಯಾತ ಮೈಸೂರು ದಸರಾ (Dasara)  ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಆ ಬೆನ್ನಲ್ಲೇ ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. ಅಭಿಮನ್ಯು, ಭೀಮ, ಪ್ರಶಾಂತ, ಮಹೇಂದ್ರ, ಏಕಲವ್ಯ, ಕಂಜನ್, ಧನಂಜಯ, ಲಕ್ಷ್ಮಿ, ಕಾವೇರಿ, ಶ್ರೀಕಂಠ, ಸುಗ್ರೀವ ,ಗೋಪಿ, ರೂಪ, ಹೇಮಾವತಿ ಆನೆಗಳು  ಲಾರಿಗಳ‌ ಮೂಲಕ ಕಾಡಿಗೆ ತೆರಳಲಿವೆ. ಇನ್ನು ಕಾಡಿಗೆ ಹೊರಟ ಆನೆಗಳ ಜೊತೆ ಪ್ರವಾಸಿಗರು ಸೆಲ್ಫಿಗೆ ಮುಗಿಬಿದ್ದ ಪ್ರಸಂಗವೂ ನಡೀತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 05, 2025 01:00 PM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More