ಸಿಎಂ ಮತ್ತು ಡಿಸಿಎಂ ವಿರುದ್ಧ ಯುದ್ಧ ಘೋಷಿಸಿದ ಬಳಿಕ ಪಕ್ಷದ ಕೋರ್ ಕಮಿಟಿ ಸಭೆ ಕರೆದ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 05, 2025 | 9:41 PM

ಕುಮಾರಸ್ವಾಮಿಯವರು ಪಕ್ಷದ ಜವಾಬ್ದಾರಿಯನ್ನು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ವಹಿಸಿಕೊಡುವ ಯೋಚನೆ ಮಾಡುತ್ತಿದ್ದಾರೆ, ಪ್ರಾಯಶಃ ಮೇನಲ್ಲಿ ನಿಖಿಲ್ ಪಟ್ಟಾಭಿಷೇಕ ಮತ್ತು ಅಧಿಕಾರ ಹಸ್ತಾಂತರ ನಡೆಯಬಹುದು. ಅವರ ನಿರ್ಧಾರದಲ್ಲಿ ಎಲ್ಲ ಜೆಡಿಎಸ್ ನಾಯಕರು ಒಮ್ಮತ ಹೊಂದಿದ್ದಾರೋ ಇಲ್ಲವೋ ಅಂತ ಕುಮಾರಸ್ವಾಮಿಯವರೇ ಹೇಳಬೇಕು. ಯಾಕೆಂದರೆ ನಿಖಿಲ್ ರನ್ನು ಲಾಂಚ್ ಮಾಡುವ ಪ್ರಯತ್ನಗಳು ಹಿಂದೆ ವಿಫಲವಾಗಿವೆ.

ಬೆಂಗಳೂರು, ಏಪ್ರಿಲ್ 5: ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಇಂದು ತಮ್ಮ ಮನೆಯಲ್ಲಿ ಪಕ್ಷ ಪಕ್ಷದ ಕೋರ್ ಕಮಿಟಿ ಮೀಟಿಂಗ್ ನಡೆಸಿದರು. ಸಭೆಗೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ಒಬ್ಬೊಬ್ಬರಾಗಿ ಆಗಮಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ (GT Devegowda) ಅವರು ಕುಮಾರಸ್ವಾಮಿಯೊಂದಿಗೆ ಅಂತರ ಕಾಯ್ದುಕೊಳ್ಳುತ್ತಿರುವುದರಿಂದ ಸಭೆಗೆ ಹಾಜರಾಗಲಿಲ್ಲ. ಇವತ್ತಿನ ಪತ್ರಿಕಾ ಗೋಷ್ಠಿಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಯುದ್ಧ ಸಾರಿರುವುದಾಗಿ ಹೇಳಿದ್ದು ಮತ್ತು ಸಾಯಂಕಾಲ ಸಭೆ ನಡೆಸುತ್ತಿರುವುದು ಕುತೂಹಲವಂತೂ ಮೂಡಿಸಿದೆ.

ಇದನ್ನೂ ಓದಿ: ಮುಡಾ ಹಗರಣ: 15 ಸೈಟು ಡಿನೋಟಿಫೈ ಮಾಡಿ ಎಂದು ಅರ್ಜಿ ಕೊಟ್ಟಿದ್ದೇ ಸಿಎಂ ಭಾವಮೈದ, ಕುಮಾರಸ್ವಾಮಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.