Question on Dr K Sudhakar’s efficiency: ಗೂಳಿಹಟ್ಟಿ ಶೇಖರ್ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ರಿಂದ ಪೇಚಿಗೆ ಸಿಕ್ಕ ಸರ್ಕಾರ!

ಅರುಣ್​ ಕುಮಾರ್​ ಬೆಳ್ಳಿ

Updated on: Feb 15, 2023 | 4:20 PM

ಹಾವೇರಿಯ ಮೆಡಿಕಲ್ ಕಾಲೇಜಿನಲ್ಲಿ 70 ಹುದ್ದೆಗಳಿಗಾಗಿ ಪ್ರಾವಿಜನಲ್ ಪಟ್ಟಿ ಜನೆವರಿ 2020ರಲ್ಲೇ ಬಿಡುಗಡೆಯಾದರೂ ಇದುವರೆಗೆ ನೇಮಕಾತಿಗಳು ಜರುಗಿಲ್ಲ ಅಂತ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಪ್ರಶ್ನಿಸುತ್ತಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಗ್ರಹಗತಿ ಸರಿ ಇದ್ದಂತಿಲ್ಲ ಮಾರಾಯ್ರೇ. ಯಾಕೆ ಅಂತ ನಿಮಗೂ ಗೊತ್ತು. ಬಿಜೆಪಿ ಶಾಸಕರೇ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಮುಖ್ಯಮಂತ್ರಿಗಳು ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಪೇಚಿಗೆ ಸಿಲುಕಿಸುತ್ತಿದ್ದಾರೆ. ಇಂದಿನ ವಿಧಾನ ಮಂಡಲದ ಕಾರ್ಯಕಲಾಪಗಳಲ್ಲಿ ಬಿಜೆಪಿಯ ಹಿರಿಯ ಶಾಸಕ ಜಗದೀಶ್ ಶೆಟ್ಟರ್ (Jagadish Shettar) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಜಿಲ್ಲೆ ಹಾವೇರಿಯ ಮೆಡಿಕಲ್ ಕಾಲೇಜಿನಲ್ಲಿ 70 ಹುದ್ದೆಗಳಿಗಾಗಿ ಪ್ರಾವಿಜನಲ್ ಪಟ್ಟಿ ಜನೆವರಿ 2020ರಲ್ಲೇ ಬಿಡುಗಡೆಯಾದರೂ ಇದುವರೆಗೆ ನೇಮಕಾತಿಗಳು ಜರುಗಿಲ್ಲ ಅಂತ ಆರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರನ್ನು ಪ್ರಶ್ನಿಸಿ ಇದು ಅವರ ಕ್ಷಮತೆಯನ್ನು ಸಂದೇಹಿಸುವ ವಿಚಾರವಾಗಿದೆ ಎನ್ನುತ್ತಾರೆ. ಅವರು ಮಾತು ಮುಂದುವರಿಸುವಾಗಲೇ ಸುಧಾಕರ್ ಮಧ್ಯಪ್ರವೇಶಿಸಿ ಶೆಟ್ಟರ್ ಎತ್ತಿದ ಪ್ರಶ್ನೆಗೆ ಉತ್ತರ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.