Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಯಡಿಯೂರಪ್ಪನೇ ನನ್ನನ್ನು ಪಕ್ಷಕ್ಕೆ ವಾಪಸ್ಸು ಕರೆದೊಯ್ಯುತ್ತಾರೆ: ಈಶ್ವರಪ್ಪ

ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಯಡಿಯೂರಪ್ಪನೇ ನನ್ನನ್ನು ಪಕ್ಷಕ್ಕೆ ವಾಪಸ್ಸು ಕರೆದೊಯ್ಯುತ್ತಾರೆ: ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 23, 2024 | 1:57 PM

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರ ಸೋತ ಬಳಿಕ ಅವರ ರಾಜಕೀಯ ಕತೆ ಮುಗಿದಂತೆ ಮತ್ತು ಚುನಾವಣೆ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುತ್ತಾನೆ ಅಲ್ಲಿಗೆ ಬಿಜೆಪಿಯಲ್ಲಿ ಅಪ್ಪ ಮಕ್ಕಳ ಕತೆ ಮುಗಿದಂತಾಗುತ್ತದೆ ಎಂದು ಈಶ್ವರಪ್ಪ ಹೇಳಿದರು.

ಶಿವಮೊಗ್ಗ: ಪಕ್ಷದಿಂದ ತಮ್ಮನ್ನು ಉಚ್ಚಾಟಿಸಿದರೂ ಕೆಎಸ್ ಈಶ್ವರಪ್ಪ (KS Eshwarappa) ನಿರ್ಭಾವುಕ, ನಿರ್ಲಿಪ್ತ ಮತ್ತು ನಿರಾತಂಕಿತರಾಗಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡುವಾಗ ಪತ್ರಕರ್ತರೊಬ್ಬರು ಮತ್ತೇ ಬಿಜೆಪಿಗೆ ಹೋಗ್ತೀರಾ ಸಾರ್ ಅಂತ ಕೇಳಿದಾಗ ಲೋಕಸಭಾ ಚುನಾವಣೆಯಲ್ಲಿ (Lok Sabha polls) ತಾನು ಗೆದ್ದ ಬಳಿಕ ಅವರಪ್ಪ ಬಂದು ತನ್ನನ್ನು ಪಕ್ಷಕ್ಕೆ ಕರೆದೊಯ್ಯುತ್ತಾನೆ ಎಂದು ತಮ್ಮ ಬೆಂಬಲಿಗರ ಕಿವಿಗಡಚಿಕ್ಕುವ ಚಪ್ಪಾಳೆಗಳ ನಡುವೆ ಹೇಳಿದರು. ಪಕ್ಷ ಬಿಟ್ಟು ಹೋಗಿದ್ದ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಯಡಿಯೂರಪ್ಪ ವಾಪಸ್ಸು ಕರೆತಂದರು, ಆದರೆ ತಾನ್ಯಾವತ್ತೂ ಪಕ್ಷ ಬಿಟ್ಟು ಹೋಗುವ ಕೆಲಸ ಮಾಡಿಲ್ಲ ಯಾಕೆಂದರೆ ಇದು ತಾನು ಕಟ್ಟಿರುವ ಪಕ್ಷ, ಅದರೆ ಯಡಿಯೂರಪ್ಪ ಪಕ್ಷದಿಂದ ಆಚೆ ಹೋಗಿ ಕೆಜೆಪಿ ರಚಿಸಿದ್ದರು, ಹಾಗಾಗಿ ಬಿಜೆಪಿಯಲ್ಲಿ ಅವರು ಡೂಪ್ಲಿಕೇಟ್ ಎಂದು ಈಶ್ವರಪ್ಪ ಹೇಳಿದರು. ರಾಜ್ಯ ಬಿಜೆಪಿಯನ್ನು ಅಪ್ಪ ಮಕ್ಕಳಿಂದ ಮುಕ್ತ ಮಾಡುವುದು ತನ್ನ ಗುರಿಯಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರ ಸೋತ ಬಳಿಕ ಅವರ ರಾಜಕೀಯ ಕತೆ ಮುಗಿದಂತೆ ಮತ್ತು ಚುನಾವಣೆ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಯುತ್ತಾನೆ ಅಲ್ಲಿಗೆ ಬಿಜೆಪಿಯಲ್ಲಿ ಅಪ್ಪ ಮಕ್ಕಳ ಕತೆ ಮುಗಿದಂತಾಗುತ್ತದೆ ಎಂದು ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಅವರಿವರ ಕಾಲು ಹಿಡಿದು ಬಿಜೆಪಿ ರಾಜ್ಯಾಧ್ಯಕ್ಷನಾದವನಿಗೆ ನನ್ನ ಶ್ರಮದ ಬಗ್ಗೆ ಏನು ಗೊತ್ತಿರುತ್ತದೆ? ಕೆಎಸ್ ಈಶ್ವರಪ್ಪ

Published on: Apr 23, 2024 12:50 PM