ಕನಸು ಈಡೇರಿತು; ಮುಂಬೈ ಬೀದಿಗಳಲ್ಲಿ ಪುಷ್ಪವೃಷ್ಟಿ ಸುರಿಸಿ ರಿಷಬ್ ಶೆಟ್ಟಿಗೆ ಸ್ವಾಗತ
Rishab Shetty At Mumbai: ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರು ಮುಂಬೈ ಬೀದಿಗಳಲ್ಲಿ ತೆರಳುವಾಗ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ಈ ಸಂದರ್ಭದ ವಿಡಿಯೋನ ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಅವರಿಗೆ ಶುಭಾಶಯ ತಿಳಿಸಲಾಗುತ್ತಿದೆ.
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದು ಗೊತ್ತೇ ಇದೆ. ಕರ್ನಾಟಕ ಮಾತ್ರವಲ್ಲ, ಪರಭಾಷೆಯಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ಮುಂಬೈಗೆ ತೆರಳಿದ್ದಾರೆ. ಕಾರಿನ ಸನ್ರೂಫ್ ಮೂಲಕ ಹೊರ ಬಂದ ಅವರಿಗೆ ಪುಷ್ಪವೃಷ್ಟಿ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಎಲ್ಲಾ ತಂತ್ರಜ್ಞರಿಗೂ ಹೀಗೊಂದು ಕನಸು ಇರುತ್ತದೆ. ಅದು ಈಡೇರಿದೆ ಎಂದು ಅನೇಕರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Oct 12, 2025 09:16 AM
Latest Videos
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
