ಕನಸು ಈಡೇರಿತು; ಮುಂಬೈ ಬೀದಿಗಳಲ್ಲಿ ಪುಷ್ಪವೃಷ್ಟಿ ಸುರಿಸಿ ರಿಷಬ್ ಶೆಟ್ಟಿಗೆ ಸ್ವಾಗತ
Rishab Shetty At Mumbai: ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರು ಮುಂಬೈ ಬೀದಿಗಳಲ್ಲಿ ತೆರಳುವಾಗ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ಈ ಸಂದರ್ಭದ ವಿಡಿಯೋನ ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಅವರಿಗೆ ಶುಭಾಶಯ ತಿಳಿಸಲಾಗುತ್ತಿದೆ.
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದು ಗೊತ್ತೇ ಇದೆ. ಕರ್ನಾಟಕ ಮಾತ್ರವಲ್ಲ, ಪರಭಾಷೆಯಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ಮುಂಬೈಗೆ ತೆರಳಿದ್ದಾರೆ. ಕಾರಿನ ಸನ್ರೂಫ್ ಮೂಲಕ ಹೊರ ಬಂದ ಅವರಿಗೆ ಪುಷ್ಪವೃಷ್ಟಿ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಎಲ್ಲಾ ತಂತ್ರಜ್ಞರಿಗೂ ಹೀಗೊಂದು ಕನಸು ಇರುತ್ತದೆ. ಅದು ಈಡೇರಿದೆ ಎಂದು ಅನೇಕರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Oct 12, 2025 09:16 AM