ಕರ್ನೂಲ್ ಬಸ್ ದುರಂತ ಬೆನ್ನಲ್ಲೇ ಕರ್ನಾಟಕ ಆರ್​ಟಿಒ ಭರ್ಜರಿ ಕಾರ್ಯಾಚರಣೆ: ದೇವನಹಳ್ಳಿಯಲ್ಲಿ 40ಕ್ಕೂ ಹೆಚ್ಚು ಬಸ್ ಸೀಜ್

Edited By:

Updated on: Oct 30, 2025 | 10:23 AM

ಕರ್ನೂಲ್ ಬಸ್ ದುರಂತದ ನಂತರ ಎಚ್ಚೆತ್ತಿರುವ ಆರ್​ಟಿಒ ಅಧಿಕಾರಿಗಳು ದೇವನಹಳ್ಳಿ ಟೋಲ್‌ನಲ್ಲಿ ಸ್ಲೀಪರ್ ಬಸ್‌ಗಳ ಪರಿಶೀಲನೆ ನಡೆಸಿದ್ದಾರೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಂಡು ಬಂದಿದ್ದ ಉತ್ತರ ಭಾರತದ 41 ಬಸ್‌ಗಳನ್ನು ಸೀಜ್ ಮಾಡಲಾಗಿದ್ದು, ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಬಸ್ಸುಗಳಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 80ರಿಂದ 100 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ದೇವನಹಳ್ಳಿ, ಅಕ್ಟೋಬರ್ 30: ಆಂಧ್ರ ಪ್ರದೇಶದ ಕರ್ನೂಲ್​ ಬಸ್ ದುರಂತದ ಬೆನ್ನಲ್ಲೇ ಕರ್ನಾಟಕ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಬಸ್​​ಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಸಾರಿಗೆ ನಿಗಮಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಇದೀಗ ಆರ್​ಟಿಒ ಅಧಿಕಾರಿಗಳು ದೇವನಹಳ್ಳಿಯ ಏರ್​ಪೋರ್ಟ್ ಟೋಲ್ ಬಳಿ ಕಾರ್ಯಾಚರಣೆ ನಡೆಸಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಬಂದಿದ್ದ 40ಕ್ಕೂ ಹೆಚ್ಚು ಬಸ್‌ಗಳನ್ನು ಸೀಜ್ ಮಾಡಿದ್ದಾರೆ. ನಿರ್ದಿಷ್ಟವಾಗಿ, ನೇಪಾಳದಿಂದ ಜನರನ್ನು ಕರೆದುಕೊಂಡು ಬೆಂಗಳೂರಿಗೆ ಬರುತ್ತಿದ್ದ ಉತ್ತರ ಭಾರತದ ಸ್ಲೀಪರ್ ಕೋಚ್ ಬಸ್ ಒಂದನ್ನು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. 40-50 ಜನರ ಸಾಮರ್ಥ್ಯವಿರುವ ಈ ಬಸ್‌ನಲ್ಲಿ 100ಕ್ಕೂ ಅಧಿಕ ಪ್ರಯಾಣಿಕರನ್ನು ತುಂಬಿಕೊಂಡು ಬಂದಿರುವುದು ಕಾಣಿಸಿದೆ. ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ಪ್ರಯಾಣಿಕರನ್ನು ‘ಕುರಿಗಳ ಮಂದೆ’ಯಂತೆ ತುಂಬಿಕೊಂಡು ಬರಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಅನ್ನು ಸೀಜ್ ಮಾಡಿದ ಅಧಿಕಾರಿಗಳು, ಈಗಾಗಲೇ ಇಂತಹ ಐದು ಬಸ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಸುಮಾರು 41 ಬಸ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More