ಕಲಬುರಗಿಯಲ್ಲಿ ಟಿವಿ9 ನೆಟ್ವರ್ಕ್ ಆಯೋಜಿಸುತ್ತಿರುವ 2-ದಿನದ ಎಜುಕೇಶನ್ ಎಕ್ಸ್​​ಪೋ ಇಂದಿನಿಂದ

ಅರುಣ್​ ಕುಮಾರ್​ ಬೆಳ್ಳಿ

Updated on: Apr 12, 2025 | 4:12 PM

ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಕಲಬುರಗಿಯಲ್ಲಿ ಟಿವಿ9 ನೆಟ್ವರ್ಕ್ ಸತತ ಮೂರನೇ ವರ್ಷ ಎಜುಕೇಶನ್ ಸಮ್ಮಿಟ್ ಆಯೋಜಿಸುತ್ತಿದೆ. ಪ್ರತಿಸಲದಂತೆ ಈ ವರ್ಷವೂ ನೂರಾರು ವಿದ್ಯಾರ್ಥಿಗಳು ಸಮ್ಮಿಟ್​​ಗೆ ಬರುತ್ತಿದ್ದಾರೆ. ಒಂದೇ ಸೂರಿನಡಿ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್​ಗಳ ಬಗ್ಗೆ ವಿವರವಾದ ಮಾಹಿತಿ ಸಿಗುತ್ತಿದೆ. ಇಂದರಿಂದಾಗಿ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾಲೇಜಿಂದ ಕಾಲೇಜಿಗೆ ಅಲೆಯುವುದು ತಪ್ಪುತ್ತದೆ.

ಕಲಬುರಗಿ, ಏಪ್ರಿಲ್ 12: ಮೊನ್ನೆಯಷ್ಟೇ ಬೆಂಗಳೂರು ಅರಮನೆ ಮೈದಾನದಲ್ಲಿ ಅತ್ಯಂತ ಯಶಸ್ವೀಯಾಗಿ ಎಜುಕೇಶನ್ ಸಮ್ಮಿಟ್ ನಡೆಸಿದ್ದ ಟಿವಿ9 ನೆಟ್ವರ್ಕ್ ಇಂದಿನಿಂದ ಕಲಬುರಗಿಯ ಡಾ ಬಸವರಾಜಪ್ಪ ಅಪ್ಪ ಮೆಮೋರಿಯಲ್ ಹಾಲ್​ನಲ್ಲಿ (Dr Basavarajappa Appa Memorial Hall) ಎರಡು ದಿನಗಳ ಎಜುಕೇಶನ್ ಎಕ್ಸ್​​ಪೋ ನಡೆಸುತ್ತಿದೆ. ದೇಶದ ಹಲವಾರು ಭಾಗಗಳ ಹೆಸರಾಂತ ಮತ್ತು ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳು ಸಮ್ಮಿಟ್ ನಲ್ಲಿ ಭಾಗಿಯಾಗಿವೆ. ಕಲಬುರಗಿ ನಗರ ಮತ್ತು ಸುತ್ತಮುತ್ತಲಿನ ಉರುಗಳ ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸಿ ತಮ್ಮ ಮುಂದಿನ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಯಾವ ವ್ಯಾಸಂಗ, ಯಾವ ಶೈಕ್ಷಣಿಕ ಸಂಸ್ಥೆ ಉತ್ತಮ ಅನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: TV9 Kannada Education Summit 2025: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅತ್ಯುತ್ತಮ ವೇದಿಕೆ ಟಿವಿ9 ಕನ್ನಡ ಶಿಕ್ಷಣ ಶೃಂಗಸಭೆ, ಇಲ್ಲಿದೆ ಮಾಹಿತಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.