ಎಲ್ಲ ರಿಪೋರ್ಟ್ಸ್ ಸಿಕ್ಕ ನಂತರ ದರ್ಶನ್ ಚಿಕಿತ್ಸೆಯ ಸ್ವರೂಪ ನಿರ್ಧರಿಸಲಾಗುವುದು: ಡಾ ನವೀನ್ ಅಪ್ಪಾಜಿಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Nov 01, 2024 | 6:21 PM

ದರ್ಶನ್​ ಬೆನ್ನುನೋವಿನ ಶಮನಕ್ಕಾಗಿ ಆಪರೇಷನ್ ಮಾಡಬೇಕಾಗುತ್ತದೆಯೋ ಅಥವಾ ಫಿಸಿಯೋಥೆರಫಿಯಿಂದ ಅದನ್ನು ವಾಸಿಮಾಡಬಹುದೋ ಅನ್ನೋದನ್ನು ವೈದ್ಯರು ಇನ್ನೂ ನಿರ್ಧರಿಸಿಲ್ಲ, ಕೇವಲ ಬೆನ್ನು ನೋವಿನ ಚಿಕಿತ್ಸೆಗೆ ಅಂತ ಹೈಕೋರ್ಟ್ ನಟನಿಗೆ 6-ವಾರದ ಮಧ್ಯಂತರ ಜಮೀನು ನೀಡಿದೆ ಅನ್ನೋದನ್ನು ಮರೆಯಬಾರದು.

ಬೆಂಗಳೂರು: ವಿಪರೀತ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರನ್ನು ಬಿಜಿಎಸ್ ಗ್ಲೆನೀಗಲ್ಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಅರೋಗ್ಯ ಸ್ಥಿತಿಯ ಬಗ್ಗೆ ವಿವರಣೆ ನೀಡಿದ ಡಾ ನವೀನ್ ಅಪ್ಪಾಜಿಗೌಡ, ಸದ್ಯಕ್ಕೆ ದರ್ಶನ್​ ಅವರ ಚೆಕಪ್ ಅಷ್ಟೇ ಮಾಡಲಾಗಿದೆ, ಅವರ ಎಮ್​ಆರ್​ಐ, ಎಕ್ಸ್-ರೇ ಮತ್ತು ರಕ್ತ ಪರೀಕ್ಷಣೆ ಆಗಬೇಕಿದೆ. ರಿಪೋರ್ಟ್ ಗಳು ಬಂದ ಬಳಿಕ ಚಿಕಿತ್ಸೆಯ ಸ್ವರೂಪ ನಿರ್ಧರಿಸಲಾಗುತ್ತದೆ, ಅವರ ಬೆನ್ನುನೋವು ಅಪರಿಮಿತವಾಗಿದ್ದು ಎಡಗಾಲಿನ ಸೆಳೆತದಿಂದ ಸಹ ಬಳಲುತ್ತಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ನಟ ದರ್ಶನ್​ ವಿಚಾರದಲ್ಲಿ ಅರ್ಜುನ್ ಗುರೂಜಿ ನುಡಿದಿದ್ದ ಭವಿಷ್ಯ ನಿಜ ಆಯ್ತು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.