Dinesh Gundu Rao: ಕಚೇರಿಯ ಪೂಜೆ ನೆರವೇರಿಸಿ ಕಾರ್ಯೋನ್ಮುಖರಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2023 | 1:01 PM

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಸಚಿವರು ರಾಜ್ಯದ ಡಯಾಲಿಸಿಸ್ ಸೆಂಟರ್ ಗಳಲ್ಲಿ ಆವ್ಯವಸ್ಥೆ ತಾಂಡವಾಡುತ್ತಿದೆ ಅದನ್ನು ಸರಿಪಡಿಸಬೇಕಿದೆ ಎಂದರು.

ಬೆಂಗಳೂರು: ಕೆಲ ವರ್ಷಗಳಿಂದ ನೇಪಥ್ಯಕ್ಕೆ ಸರಿದಿದ್ದ ಹಿರಿಯ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ (Dinesh Gundu Rao) 2023 ರ ಚುನಾವಣೆಯಲ್ಲಿ ಗೆದ್ದು ಮತ್ತೇ ಮುನ್ನೆಲೆಗೆ ಬಂದಿದ್ದಾರೆ. ಸಿದ್ದರಾಮಯ್ಯ (Siddaramaiah) ಸಂಪುಟದಲ್ಲಿ ಆರೋಗ್ಯ ಸಚಿವರಾಗಿರುವ ಅವರು ಇಂದು ತಮ್ಮ ಕಚೇರಿಯಲ್ಲಿ ಪೂಜೆ ಮಾಡಿಸಿ ಸ್ಥಾನದಲ್ಲಿ ಆಸೀನರಾದರು. ಇಲಾಖೆಯ ಅಧಿಕಾರಿಗಳು ಮತ್ತು ಸಚಿವರ ಕೆಲ ಆಪ್ತರು ಪೂಜೆ ವೇಳೆ ಕಚೇರಿಯಲ್ಲಿ ಹಾಜರಿದ್ದರು. ಪೂಜೆಯ ಬಳಿಕ ಇಲಾಖೆಯ ಕೆಲಸಗಳನ್ನು ಕೈಗೆತ್ತಿಕೊಂಡು ಸಚಿವರು ಮಾಡಿದ ಮೊದಲ ಕೆಲಸವೆಂದರೆ, ಹಿಂದಿನ ಆರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಜಾರಿ ಮಾಡಿದ್ದ 108 ಅಂಬ್ಯುಲೆನ್ಸ್ ಟೆಂಡರ್ ಗಳನ್ನು ರದ್ದು ಮಾಡಿದ್ದು. ಬಳಿಕ ಸಚಿವ ಗುಂಡೂರಾವ್ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿ ರಾಜ್ಯದ ಡಯಾಲಿಸಿಸ್ ಸೆಂಟರ್ ಗಳಲ್ಲಿ ಆವ್ಯವಸ್ಥೆ ತಾಂಡವಾಡುತ್ತಿದೆ ಅದನ್ನು ಸರಿಪಡಿಸಬೇಕಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.