ಸಿದ್ದರಾಮಯ್ಯ ರಿಟೈರ್​ಮೆಂಟ್​​ಗೆ ಹತ್ತಿರವಿರುವ ಔಟ್​​ಗೋಯಿಂಗ್ ಚೀಫ್ ಮಿನಿಸ್ಟರ್: ಆರ್ ಅಶೋಕ

Updated on: Jun 12, 2025 | 1:54 PM

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟು ಹೋಗಿದೆ, ಗೃಹ ಸಚಿವರು ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರಾಗಿದ್ದಾರೆ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವೂ ತಪ್ಪುವ ಲಕ್ಷಣಗಳಿವೆ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಕಡೆಯಂತೂ ಯಾರೂ ತಿರುಗಿ ನೋಡುವ ಹಾಗಿಲ್ಲ, ಇವೆರಡು ಜಿಲ್ಲೆಗಳು ಮುಖ್ಯಮಂತ್ರಿಯವರ ಕುಟುಂಬದ ನಿಗ್ರಾಣಿಯಲ್ಲಿವೆ ಎಂದು ಅಶೋಕ ವ್ಯಂಗ್ಯವಾಡಿದರು.

ಮೈಸೂರು, ಜೂನ್ 12: ಸಿದ್ದರಾಮಯ್ಯ (Siddaramaiah) ಬೇರೆ ಸರ್ಕಾರಗಳ ಬಗ್ಗೆ ಕಾಮೆಂಟ್ ಮಾಡೋದು, ಮಾರ್ಕ್ಸ್ ನೀಡೋದು ಯಾರಿಗೂ ಬೇಕಾಗಿಲ್ಲ, ಅವರೇನೋ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿರಬಹುದು, ಅದರೆ 6ತಿಂಗಳು ನಂತರ ಅವರ ಅಧಿಕಾರದ್ದೇ ಗ್ಯಾರಂಟಿ ಇಲ್ಲ, ಅವರೊಬ್ಬ ಔಟ್​ ಗೋಯಿಂಗ್ ಚೀಫ್ ಮಿನಿಸ್ಟರ್, ನಿವೃತ್ತ ಜೀವನಕ್ಕೆ ಹತ್ತಿರದಲ್ಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ ಹೇಳಿದರು. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸಿದ್ದರಾಮಯ್ಯರ ಅಭಿವೃದ್ಧಿಹೀನ ಸರ್ಕಾರಕ್ಕೆ ಸೊನ್ನೆ ನಂಬರನ್ನೂ ಕೊಡಲಾಗಲ್ಲ, ಅದೇನಿದ್ದರೂ ಮೈನಸ್​ನಲ್ಲಿ ಕೊಡಬೇಕು ಎಂದು ಅಶೋಕ ಹೇಳಿದರು.

ಇದನ್ನೂ ಓದಿ:  ಭೂಮಿಕ್​​ನನ್ನು ಕಳೆದುಕೊಂಡಿರುವ ಲಕ್ಷ್ಮಣ ಅವರಿಗೆ ಸಮಾಧಾನ ಹೇಳಲು ಬಂದಿದ್ದೇನೆ, ರಾಜಕೀಯಕ್ಕಲ್ಲ: ಅರ್ ಅಶೋಕ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More