ಬಳ್ಳಾರಿಯಲ್ಲಿ ಮೂರು ವಾರಗಳಿಂದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ರೀಓಪನ್; ಟಿವಿ9 ವರದಿ ಇಂಪ್ಯಾಕ್ಟ್!
ಕ್ಯಾಂಟೀನಲ್ಲಿ ಕೆಲಸ ಮಾಡುವ ಸಿಬ್ಬಂದಿ ಹೇಳುವ ಪ್ರಕಾರ ಸರ್ಕಾರದಿಂದ ಸುಮಾರು ಕೋಟಿ ರೂ.ಗಳಷ್ಟು ಬಿಲ್ ಪಾವತಿಯಾಗಿರಲಿಲ್ಲ. 3 ಕೋಟಿ ರೂ. ಚಿಕ್ಕ ಮೊತ್ತವೇನಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಗಳ ಉದ್ದೇಶ ಅರ್ಥವಾಗಲ್ಲ. ಸಿದ್ದರಾಮಯ್ಯ ಸರ್ಕಾರ ಆಧಿಕಾರಕ್ಕೆ ಬರುವ ಮೊದಲು ರಾಜ್ಯವನ್ನಾಳುತ್ತಿದ್ದ ಬಿಜೆಪಿ ಸರ್ಕಾರಕ್ಕೆ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಉದಾಸೀನತೆ ಇತ್ತು.
ಬಳ್ಳಾರಿ: ನಗರದ ಮೋತಿ ಸರ್ಕಲ್ ನಲ್ಲಿರುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ (Indira Canteen) ಕಳೆದ ಮೂರು ಬಂದ್ ಆಗಿ, ವಿದ್ಯಾರ್ಥಿಗಳು ಮತ್ತು ಕಾರ್ಮಿಕರಿಗೆ ಬಹಳ ತೊಂದರೆಯಾಗುತ್ತಿರುವ ಸಂಗತಿಯನ್ನು ಟಿವಿ9 ವರದಿ ಮಾಡಿತ್ತು. ಆ ವರದಿಯಿಂದ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ (district administration) ಎಚ್ಚೆತ್ತುಕೊಂಡಿವೆ. ಕ್ಯಾಂಟೀನಲ್ಲಿ ಕೆಲಸ ಮಾಡುವ ಸಿಬ್ಬಂದಿ ಹೇಳುವ ಪ್ರಕಾರ ಸರ್ಕಾರದಿಂದ ಸುಮಾರು ಕೋಟಿ ರೂ.ಗಳಷ್ಟು ಬಿಲ್ ಪಾವತಿಯಾಗಿರಲಿಲ್ಲ (non remittance of bills). 3 ಕೋಟಿ ರೂ. ಚಿಕ್ಕ ಮೊತ್ತವೇನಲ್ಲ ಮಾರಾಯ್ರೇ! ಈ ಹಿನ್ನೆಲೆಯಲ್ಲಿ ಸರ್ಕಾರಗಳ ಉದ್ದೇಶ ಅರ್ಥವಾಗಲ್ಲ. ಸಿದ್ದರಾಮಯ್ಯ ಸರ್ಕಾರ ಆಧಿಕಾರಕ್ಕೆ ಬರುವ ಮೊದಲು ರಾಜ್ಯವನ್ನಾಳುತ್ತಿದ್ದ ಬಿಜೆಪಿ ಸರ್ಕಾರಕ್ಕೆ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಉದಾಸೀನತೆ ಇತ್ತು.
ಮೂರು ವರ್ಷಗಳಿಂದ ಬಿಲ್ ಗಳು ಬಾಕಿಯುಳಿದಿದ್ದವು ಅಂತ ಸಿಬ್ಬಂದಿ ಹೇಳುತ್ತಾರೆ. ಆದರೆ ಸಂತೋಷದ ಸಂಗತಿಯೆಂದರೆ, ಟಿವಿ9 ವರದಿ ಬಿತ್ತರಗೊಂಡ ಬಳಿಕ ಜಿಲ್ಲಾಡಳಿತ ಕ್ಯಾಂಟೀನ್ ನಡೆಸುವ ವ್ಯಕ್ತಿಯನ್ನು ಕರೆಸಿ ಮಾತಾಡಿದೆ ಮತ್ತು ಎಂಟ್ಹತ್ತು ದಿನಗಳಲ್ಲಿ ಬಿಲ್ ಗಳನ್ನು ಚುಕ್ತಾ ಮಾಡುವ ಭರವಸೆ ಸಹ ನೀಡಿದೆ. ಅದೇ ಹಿನ್ನೆಲೆಯಲ್ಲಿ ಕ್ಯಾಂಟೀನ್ ಓಪನ್ ಆಗಿದ್ದು ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸಂತಸವನ್ನುಂಟು ಮಾಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 10, 2024 11:10 AM
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
