ನಗರದ ಸಮಸ್ಯೆಗಳನ್ನು ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ದುರಸ್ತಿಗಾಗಿ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: May 24, 2024 | 5:37 PM

ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಹಾಕಿದ್ದು ಕೇವಲ ಫೋಟೋಶೂಟ್ ಗಾಗಿಯೇ ಹೊರತು ಮತ್ಯಾವುದಕ್ಕೂ ಅಲ್ಲ, ರಾಜಾ ಕಾಲುವೆಗಳಲ್ಲಿ ಹೂಳು ತುಂಬಿದೆ ರಸ್ತೆಗಳಲ್ಲಿ ಲಕ್ಷಾಂತರ ಗುಂಡಿಗಳು ಬಿದ್ದಿವೆ, ಅವುಗಳನ್ನು ಸರಿಪಡಿಸಲು ಮುಖ್ಯಮಂತ್ರಿಯವರು ಒಂದು ರೂಪಾಯಿಯನ್ನಾದರೂ ಬಿಡುಗಡೆ ಮಾಡಿದರೇ? ಎಂದು ಆಶೋಕ ಕೇಳಿದರು.

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ (Brand Bengaluru) ಅಂತ ಹೇಳಿ ಒಂದು ವರ್ಷವಾದರೂ ಯೋಜನೆಗಾಗಿ ಇದುವರೆಗೆ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಅರ್ ಅಶೋಕ (R Ashoka) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಮಳೆಗಾಲ ಶುರುವಾಗುವ ಮೊದಲೇ ಮಳೆ ನೀರಿನಿಂದ ಅಗುವ ತೊಂದರೆಗಳ ನಿವಾರಣೆಗೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಕಮೀಶನರ್ (BBMP Commissioner) ಒಂದು ತಿಂಗಳ ಹಿಂದೆ ಹೇಳಿದ್ದರು. ಎಲ್ಲಿದೆ ಸಿದ್ಧತೆ, ಯಾವ ರಾಜಾಕಾಲುವೆಯಿಂದ ಹೂಳೆತ್ತಲಾಗಿದೆ? ಎಂದು ಪ್ರಶ್ನಿಸಿದ ಅಶೋಕ ಎಲ್ಲ ಸಿದ್ಧತೆಗಳಾಗಿದ್ದರೆ ಮುಖ್ಯಮಂತ್ರಿಯವರು ಮೊನ್ನೆ ಸಿಟಿ ರೌಂಡ್ಸ್ ಗೆ ಹೋಗುವ ಅವಶ್ಯಕತೆ ಏನಿತ್ತು ಎಂದರು. ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ಹಾಕಿದ್ದು ಕೇವಲ ಫೋಟೋಶೂಟ್ ಗಾಗಿಯೇ ಹೊರತು ಮತ್ಯಾವುದಕ್ಕೂ ಅಲ್ಲ, ರಾಜಾ ಕಾಲುವೆಗಳಲ್ಲಿ ಹೂಳು ತುಂಬಿದೆ ರಸ್ತೆಗಳಲ್ಲಿ ಲಕ್ಷಾಂತರ ಗುಂಡಿಗಳು ಬಿದ್ದಿವೆ, ಅವುಗಳನ್ನು ಸರಿಪಡಿಸಲು ಮುಖ್ಯಮಂತ್ರಿಯವರು ಒಂದು ರೂಪಾಯಿಯನ್ನಾದರೂ ಬಿಡುಗಡೆ ಮಾಡಿದರೇ? ಎಂದು ಆಶೋಕ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅಶೋಕ ಸ್ವಭಾವವೇ ಹಾಗೆ, ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ಎಸ್ ಅರ್ ವಿಶ್ವನಾಥ್, ಬಿಜೆಪಿ ಶಾಸಕ

Published on: May 24, 2024 05:36 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.