AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಳೆ, ಹೆಬ್ಬಾಳ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಂದಿನ ಟ್ರಾಫಿಕ್ ಸಮಸ್ಯೆ

ಬೆಂಗಳೂರಲ್ಲಿ ಮಳೆ, ಹೆಬ್ಬಾಳ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಂದಿನ ಟ್ರಾಫಿಕ್ ಸಮಸ್ಯೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 19, 2024 | 3:38 PM

Share

ಹೆಬ್ಬಾಳ ಮುಖ್ಯರಸ್ತೆ ಅಂದರೆ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯು ನಗರದಲ್ಲಿ ಮಳೆಯಾದರೆ ಅತಿಹೆಚ್ಚು ಪ್ರಭಾವಕ್ಕೊಳಗಾಗುವ ರಸ್ತೆ ಎಂದರೆ ಉತ್ಪ್ರೇಕ್ಷೆ ಅನಿಸದು. ಇದು ನಗರದ ಅತ್ಯಂತ ಬ್ಯೂಸಿ ಮತ್ತು ವಾಹನದಟ್ಟಣೆಯ ಪ್ರದೇಶವಾಗಿದ್ದು ಅವೈಜ್ಞಾನಿಕ ರಸ್ತೆ ನಿರ್ಮಾಣ ಕೂಡ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.

ಬೆಂಗಳೂರು: ನಗರದಲ್ಲಿ ಮಳೆಯಾಗತೊಡಗಿದರೆ ನಿವಾಸಿಗಳು ಬೆಚ್ಚಿ ಬೀಳಲಾರಂಭಿಸಿದ್ದಾರೆ. ಒಂದೆಡೆ ಟ್ರಾಫಿಕ್ ಸಮಸ್ಯೆಯಾದರೆ ಮತ್ತೊಂದೆಡೆ ರಸ್ತೆ ಮತ್ತು ಮನೆಗಳಿಗೆ ನುಗ್ಗುವ ನೀರು. ಇಂದು ಮಧ್ಯಾಹ್ನ ಬೆಂಗಳೂರಲ್ಲಿ ಮಳೆಯಾಯಿತು. ಹೆಬ್ಬಾಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಿಂದಾಗಿ ಉಂಟಾದ ಸ್ಥಿತಿಯನ್ನು ನಮ್ಮ ವರದಿಗಾರ ತೋರಿಸಿದ್ದಾರೆ. ಏರ್ಪೋರ್ಟ್ ನಿಂದ ನಗರದೊಳಗೆ ಬರುವ ರಸ್ತೆಯಲ್ಲಿ ಕಾರು ಮತ್ತು ಬೇರೆ ವಾಹನಗಳು ಆಮೆಗತಿಯಲ್ಲಿ ಸಾಗುತ್ತಿರುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರು ಮಳೆ ಅವಾಂತರ: ತುಂತುರು ಅಲ್ಲಿ ನೀರ ಹಾಡು, ಹಗಲಿನಲಿ, ಇರುಳಿನಲಿ, ಬಿಬಿಎಂಪಿ ಮಲಗಿರಲಿ!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.