ಚಿಕ್ಕಬಳ್ಳಾಪುರ ಕೃಷಿ ಕಚೇರಿಯಲ್ಲಿ ₹3 ಲಕ್ಷ ಲಂಚ ಸ್ವೀಕರಿಸುತ್ತ ರೆಡ್​ಹೆಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 05, 2025 | 8:03 PM

ಲೋಕಾಯುಕ್ತ ಅಧಿಕಾರಿಗಳು ರಾಜ್ಯದಾದ್ಯಂತ ದಾಳಿ ನಡೆಸಿ ಭ್ರಷ್ಟರನ್ನು ಬಲೆಗೆ ಕೆಡವಿದರೂ ಸರ್ಕಾರೀ ಕಚೇರಿಗಳಲ್ಲಿ ಲಂಚಗುಳಿತನ ಕಡಿಮೆಯಾಗುತ್ತಿಲ್ಲ. ತಾಲೂಕು ಕಚೇರಿಗಳಲ್ಲಿ ಎಲ್ಲಾದಕ್ಕೂ ಇಷ್ಟಿಷ್ಟು ಅಂತ ದರ ನಿಗದಿಯಾಗಿರುತ್ತದೆ, ದುಡ್ಡು ಕೊಟ್ಟರೆ ಮಾತ್ರ ನಿಮ್ಮ ಫೈಲ್ ಗೆ ಕಾಲು ಬರುತ್ತವೆ ಮತ್ತು ಮುಂದಕ್ಕೆ ಸಾಗಲಾರಂಭಿಸುತ್ತದೆ, ಇಲ್ಲದಿದ್ದರೆ ನಿಶ್ಚಲವಾಗಿ ಬಿದ್ದಲ್ಲೇ ಬಿದ್ದಿರುತ್ತದೆ! ಎಲ್ಲ ಸರ್ಕಾರೀ ಕಚೇರಿಗಳಲ್ಲಿ ಇದೇ ದೃಶ್ಯ.

ಬೆಂಗಳೂರು, ಏಪ್ರಿಲ್ 5: ಲೋಕಾಯುಕ್ತ ಬಲೆಗೆ ಮತ್ತೊಂದು ಭ್ರಷ್ಟ ಮಿಕ ಬಿದ್ದಿದೆ. ಚಿಕ್ಕಬಳ್ಳಾಪುರದ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುವ ಶಂಕರಯ್ಯ (agriculture officer Shankaraiah) ಎನ್ನುವವರು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದಾರೆ. ಮಂಜನಾಥ ಹೆಸರಿನ ಗುತ್ತಿಗೆದಾರರೊಬ್ಬರ ಬಳಿ ಶಂಕರಯ್ಯ ಮೂರು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದರಂತೆ. ಇವತ್ತು ₹ 2 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಎಸ್​ಪಿ ಅಂಟೋನಿ ಜಾನ್ ನೇತೃತ್ವದ ಅಧಿಕಾರಿಗಳ ತಂಡವು ದಾಳಿ ನಡೆಸಿ ಶಂಕರಯ್ಯರನ್ನು ಹಣದೊಂದಿಗೆ ಹಿಡಿದಿದ್ದಾರೆ.

ಇದನ್ನೂ ಓದಿ:  Lokayukta Raid: ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ಕರ್ನಾಟಕದ 7 ಕಡೆ ಲೋಕಾಯುಕ್ತ ದಾಳಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.