Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಎಐಸಿಸಿ ಉತ್ತಮವಾದ ಸೂತ್ರವನ್ನು ರೂಪಿಸಿದೆ: ಡಿಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಎಐಸಿಸಿ ಉತ್ತಮವಾದ ಸೂತ್ರವನ್ನು ರೂಪಿಸಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 28, 2025 | 1:47 PM

ಬಸನಗೌಡ ಪಾಟೀಲ್ ಯತ್ನಾಳ್​ರನ್ನು ಉಚ್ಚಾಟಿಸದ ಬಳಿಕ ಮುಂದಿನ ಸರದಿ, ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರದ್ದು ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಬೇರೆ ಪಕ್ಷಗಳ ಕ್ರಮಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಅವರ ವಕ್ತಾರನಾಗುವುದು ಬೇಕಿಲ್ಲ ಎಂದು ಹೇಳಿ ಕೊಲೆಯತ್ನದ ಬಗ್ಗೆ ಶಾಸಕ ರಾಜೇಂದ್ರ ರಾಜಣ್ಣ ದೂರು ನೀಡಿದ್ದರೆ ಗೃಹ ಸಚಿವ ಗಮನ ಹರಿಸುತ್ತಾರೆ ಎಂದರು.

ದೆಹಲಿ, ಮಾರ್ಚ್ 27: ದೆಹಲಿಯಲ್ಲಿ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಬಲಡಿಸಲು ಎಐಸಿಸಿ (AICC) ತೆಗೆದುಕೊಂಡಿರುವ ಕ್ರಮಗಳನ್ನು ಸ್ವಾಗತಿಸುತ್ತಾ ಮೆಚ್ಚುಗೆ ವ್ಯಕ್ತಪಡಿಸಿದರು. ಪಕ್ಷವನ್ನು ಬಲಪಡಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಎಐಸಿಸಿ ತರಬೇತಿ ಶಿಬಿರವನ್ನು ಏರ್ಪಡಿಸಿತ್ತು, ಮಾಧ್ಯಮದವರ ಜೊತೆ ಹೇಗೆ ವರ್ತಿಸಬೇಕು, ಸಾಮಾಜಿಕ ಜಾಲತಾಣಗಳನ್ನು ಹೇಗೆ ನಿರ್ವಹಿಸಬೇಕು, ಪಕ್ಷದ ಆಸ್ತಿಗಳನ್ನು ಹೇಗೆ ಕಾಯ್ದುಕೊಳ್ಳಬೇಕು ಮತ್ತು ಸದಸ್ಯರ ಸಂಖ್ಯೆಯನ್ನು ಹೇಗೆ ಹೆಚ್ಚಿಸಬೇಕು ಮೊದಲಾದ ವಿಷಯಗಳಲ್ಲಿ ತರಬೇತಿ ನೀಡಲಾಯಿತು ಎಂದು ಶಿವಕುಮಾರ್ ಹೇಳಿದರು.

ವಿಡಿಯೋ ಸ್ಟೋರಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂವಿಧಾನ ಬದಲಿಸುವ ಮಾತಾಡಿದ್ದರೆ ರಾಜಕೀಯದಿಂದ ನಿವೃತ್ತನಾಗ್ತೀನಿ: ಡಿಕೆ ಶಿವಕುಮಾರ್