ಅಜ್ಜನಂತೆ ಅಜಾತಶತ್ರು ಆಗುವುದೇ ನನ್ನ ಗುರಿ: ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್​​ ಶಾಮನೂರು

Edited By:

Updated on: May 06, 2026 | 3:50 PM

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್​​ನ ಸಮರ್ಥ್​​ ಶಾಮನೂರು, ಸಾಸಕನಾಗಿ ತಮ್ಮ ಕನಸು ಏನೆಂಬುದನ್ನು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಉದ್ದೇಶ. ಸದ್ಯಕ್ಕೆ ಮದುವೆ ವಿಚಾರ ಇಲ್ಲವೆಂದು ಈ ವೇಳೆ ತಿಳಿಸಿದ್ದು, ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದೂ ಮಾಹಿತಿ ನೀಡಿದ್ದಾರೆ.

ದಾವಣಗೆರೆ, ಮೇ 06: ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯ ಇದೆ ಎಂದುನ ಜನರು ನನ್ನ ಗೆಲ್ಲಿಸಿದ್ದಾರೆಬ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಗುರಿ. ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ಓಪನ್​​ ಆಗಿರಲಿದ್ದು, ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 06, 2026 03:49 PM
Follow Us