‘ಸುದೀಪ್ ಸರ್ ಪರ ನಾವು ಯಾವತ್ತೂ ಇರ್ತೀವಿ’; ಉಮೇಶ್ ಬಣಕಾರ್
ಚರ್ಚೆ ಆಗುತ್ತಿರುವ ಈ ವಿಚಾರದ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರು ಮಾತನಾಡಿದ್ದಾರೆ. ‘ಸುದೀಪ್ ಸರ್ ಪರ ನಾವು ಯಾವತ್ತೂ ಇರುತ್ತೇವೆ’ ಎನ್ನುವ ಮಾತನ್ನು ಅವರು ಹೇಳಿದ್ದಾರೆ.
‘ಹಿಂದಿ (Hindi) ರಾಷ್ಟ್ರ ಭಾಷೆಯಾಗಿ ಉಳಿದಿಲ್ಲ’ ಎನ್ನುವ ಮಾತನ್ನು ಸುದೀಪ್ ಹೇಳಿದ್ದರು. ಇದಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ (Ajay Devgun) ಅವರು ಸಿಟ್ಟಾಗಿದ್ದರು. ಅಲ್ಲದೆ, ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಸುದೀಪ್ (Sudeep) ಸರಿಯಾಗೇ ತಿರುಗೇಟು ನೀಡಿದ್ದರು. ಈ ವಿಚಾರ ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅನೇಕ ಸ್ಟಾರ್ ನಟರು ಸುದೀಪ್ ಪರ ಬ್ಯಾಟ್ ಬೀಸಿದ್ದಾರೆ. ‘ಹಿಂದಿ ರಾಷ್ಟ್ರ ಭಾಷೆ’ ಎಂದು ಹೇಳಿರುವ ಅಜಯ್ ದೇವಗನ್ಅವರನ್ನು ಅನೇಕರು ಟೀಕೆ ಮಾಡಿದ್ದಾರೆ. ಈಗ ಈ ವಿಚಾರದ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರು ಮಾತನಾಡಿದ್ದಾರೆ. ‘ಸುದೀಪ್ ಸರ್ ಪರ ನಾವು ಯಾವತ್ತೂ ಇರುತ್ತೇವೆ’ ಎನ್ನುವ ಮಾತನ್ನು ಅವರು ಹೇಳಿದ್ದಾರೆ.
ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ; ಹಿಂದಿ ಬಗ್ಗೆ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿ ಸಿಎಂ ಬೊಮ್ಮಾಯಿ
Loading...
Unable to load recommendations.
Follow Us
