ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು

Updated on: Apr 08, 2025 | 9:59 PM

ನಟ ಅಜಯ್ ರಾವ್ ಅವರು ‘ಯುದ್ಧಕಾಂಡ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಹಣದ ಕೊರತೆಯಿಂದ ಅವರು ಕಾರು ಮಾರಿದ್ದಾರೆ. ಈ ವೇಳೆ ಅವರ ಪುತ್ರಿ ಚೆರಿಷ್ಮಾ ಕಣ್ಣೀರು ಹಾಕಿದ್ದಾಳೆ. ಈ ವಿಡಿಯೋ ವೈರಲ್ ಆಗಿದೆ. ತನ್ನ ಇಷ್ಟದ ಕಾರನ್ನು ಮಾರುವುದು ಬೇಡ ಎಂದು ಆಕೆ ಹಟ ಮಾಡಿದ್ದಾಳೆ.

ಏಪ್ರಿಲ್ 18ರಂದು ‘ಯುದ್ಧಕಾಂಡ’ ಸಿನಿಮಾ (Yuddhakaanda Movie) ಬಿಡುಗಡೆ ಆಗಲಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ಅಜಯ್ ರಾವ್ ಅವರಿಗೆ ಹಣದ ಕೊರತೆ ಬಂದಿದ್ದರಿಂದ ಬಿಎಂಡಬ್ಲ್ಯು ಕಾರು ಮಾರಿದ್ದಾರೆ. ಆದರೆ ಕಾರು ಮಾರಿದ್ದಕ್ಕೆ ಅವರ ಮಗಳು (Ajay Rao Daughter) ಚೆರಿಷ್ಮಾಗೆ ಬೇಜಾರಾಗಿದೆ. ಕಾರು ಮಾರುವುದು ಬೇಡ ಎಂದು ಆಕೆ ಅತ್ತಿದ್ದಾಳೆ. ಮಗಳನ್ನು ಸಮಾಧಾನ ಮಾಡಲಿ ಅಜಯ್ ರಾವ್ (Ajay Rao) ಪ್ರಯತ್ನಿಸಿದ್ದಾರೆ. ‘ಯುದ್ಧಕಾಂಡ’ ಸಿನಿಮಾದಲ್ಲಿ ಅಜಯ್ ರಾವ್ ಅವರು ಲಾಯರ್ ಪಾತ್ರ ಮಾಡಿದ್ದಾರೆ. ಟ್ರೇಲರ್ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More