‘ಎಷ್ಟೇ ಎತ್ತರಕ್ಕೆ ಬೆಳೆದರೂ ಬೆಂಬಲವಾಗಿ ನಿಲ್ಲುತ್ತಾರೆ’; ಯಶ್ ಮಾಡಿದ ಸಹಾಯ ನೆನೆದ ಅಜಯ್ ರಾವ್

Updated on: Apr 04, 2025 | 10:31 AM

Yash: ಯಶ್ ಅವರು ಅನೇಕರಿಗೆ ಸಹಾಯ ಮಾಡಿದ್ದಾರೆ. ಈ ಪೈಕಿ ಅಜಯ್ ರಾವ್ ಕೂಡ ಒಬ್ಬರು. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಮಾಡಿದ ಸಹಾಯವನ್ನು ಮರೆಯಬಾರದು ಎಂದು ಅಜಯ್ ರಾವ್ ಅವರು ಹೇಳಿಕೊಂಡಿದ್ದಾರೆ. ಅವರ ಸಹಾಯಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಾ ಇದೆ.

ಕೆವಿಎನ್ ಸಂಸ್ಥೆ ‘ಯುದ್ಧಕಾಂಡ’ (Yudhdhakanda) ಚಿತ್ರವನ್ನು ರಿಲೀಸ್ ಮಾಡುತ್ತಿದೆ. ಇದಕ್ಕೆ ಕಾರಣ ಯಶ್ ಎಂದಿದ್ದಾರೆ ಅಜಯ್ ರಾವ್. ‘ಕೆವಿಎನ್​ ಜೊತೆ ಮಾತನಾಡಿ ಯಶ್ (Yash) ಅವರೇ ನಮ್ಮ ಸಿನಿಮಾದ ಹಂಚಿಕೆ ಮಾಡಿಸಿಕೊಟ್ಟಿದ್ದಾರೆ. ಅವರು ಇದನ್ನು ಹೇಳಿಕೊಳ್ಳಲು ಇಷ್ಟಪಡಲ್ಲ. ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಬೇರೆಯವರ ಸಹಾಯಕ್ಕೆ ನಿಲ್ಲುತ್ತಾರೆ. ಒಳ್ಳೆಯ ಸಿನಿಮಾ ಮಾಡಿದಾಗ ಬೆಂಬಲ ನಿಲ್ಲುತ್ತಾರೆ’ ಎಂದಿದ್ದಾರೆ ಅಜಯ್ ರಾವ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More