‘ಶಿವಣ್ಣ ಹೇಳಿದಂತೆ ನಮ್ಮ ಭಾಷೆಗಾಗಿ ನಾವು ಪ್ರಾಣ ಕೊಡೋಕೂ ರೆಡಿ’; ಅಜಯ್ ರಾವ್
ಶಿವರಾಜ್ಕುಮಾರ್ ಮಾತಿಗೆ ‘ಲವ್ ಯೂ ರಚ್ಚು’ ಸಿನಿಮಾದ ಹೀರೋ ಅಜಯ್ ರಾವ್ ಮಾತನಾಡಿದ್ದಾರೆ. ‘ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಹೊರತಾಗಿ ಬೇರೆ ಯಾವುದಾದರೂ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಬಂದರೆ ಅದಕ್ಕೆ ಚಿತ್ರರಂಗ ಸಿದ್ಧವಿದೆ ಎಂದಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ (MES) ಕಾರ್ಯಕರ್ತರು ಕರ್ನಾಟಕದ ಬಾವುಟ ಸುಟ್ಟ ದುರ್ವರ್ತನೆಯನ್ನು ಅನೇಕರು ಖಂಡಿಸುತ್ತಿದ್ದಾರೆ. ಕನ್ನಡ ಚಿತ್ರರಂಗ ಕೂಡ ಧ್ವನಿ ಎತ್ತಿದೆ. ಆ ಬಗ್ಗೆ ಶಿವರಾಜ್ಕುಮಾರ್ ಇತ್ತೀಚೆಗೆ ಮಾತನಾಡಿದ್ದರು. ‘ನಮ್ಮ ಭಾಷೆಗೆ ನಾನು ಪ್ರಾಣ ಕೊಡೋಕೂ ಸಿದ್ಧನಿದ್ದೇನೆ. ನನಗೆ 59 ವರ್ಷ ಆಯ್ತು. 60 ವರ್ಷ ನನ್ನನ್ನು ಬೆಳೆಸಿದ್ದೀರಿ. ಈಗ ಭಾಷೆಗಾಗಿಯೇ ಪ್ರಾಣ ಹೋಗಬೇಕು ಎಂದರೆ ಹೋಗಲಿ ಬಿಡಿ’ ಎಂದು ಶಿವಣ್ಣ ಹೆಳಿದ್ದರು. ಶಿವರಾಜ್ಕುಮಾರ್ ಮಾತಿಗೆ ‘ಲವ್ ಯೂ ರಚ್ಚು’ ಸಿನಿಮಾದ ಹೀರೋ ಅಜಯ್ ರಾವ್ ಮಾತನಾಡಿದ್ದಾರೆ. ‘ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಹೊರತಾಗಿ ಬೇರೆ ಯಾವುದಾದರೂ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಬಂದರೆ ಅದಕ್ಕೆ ಚಿತ್ರರಂಗ ಸಿದ್ಧವಿದೆ. ಶಿವಣ್ಣನ ಅವರು ಹೇಳಿದಂತೆ ಪ್ರಾಣ ಹೋದರೂ ಚಿಂತೆ ಇಲ್ಲ, ನಾವು ಹೋರಾಟ ಮಾಡ್ತೀವಿ’ ಎಂದಿದ್ದಾರೆ ಅವರು.
ಇದನ್ನೂ ಓದಿ: Ajay Rao: ಕಾರು ಅಪಘಾತಕ್ಕೆ ಒಳಗಾದವರಿಗೆ ಹೆದ್ದಾರಿಯಲ್ಲಿ ನಟ ಅಜಯ್ ರಾವ್ ಸಹಾಯ
Published on: Dec 22, 2021 07:00 AM
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

