‘ಶಿವಣ್ಣ ಹೇಳಿದಂತೆ ನಮ್ಮ ಭಾಷೆಗಾಗಿ ನಾವು ಪ್ರಾಣ ಕೊಡೋಕೂ ರೆಡಿ’; ಅಜಯ್ ರಾವ್
ಶಿವರಾಜ್ಕುಮಾರ್ ಮಾತಿಗೆ ‘ಲವ್ ಯೂ ರಚ್ಚು’ ಸಿನಿಮಾದ ಹೀರೋ ಅಜಯ್ ರಾವ್ ಮಾತನಾಡಿದ್ದಾರೆ. ‘ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಹೊರತಾಗಿ ಬೇರೆ ಯಾವುದಾದರೂ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಬಂದರೆ ಅದಕ್ಕೆ ಚಿತ್ರರಂಗ ಸಿದ್ಧವಿದೆ ಎಂದಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ (MES) ಕಾರ್ಯಕರ್ತರು ಕರ್ನಾಟಕದ ಬಾವುಟ ಸುಟ್ಟ ದುರ್ವರ್ತನೆಯನ್ನು ಅನೇಕರು ಖಂಡಿಸುತ್ತಿದ್ದಾರೆ. ಕನ್ನಡ ಚಿತ್ರರಂಗ ಕೂಡ ಧ್ವನಿ ಎತ್ತಿದೆ. ಆ ಬಗ್ಗೆ ಶಿವರಾಜ್ಕುಮಾರ್ ಇತ್ತೀಚೆಗೆ ಮಾತನಾಡಿದ್ದರು. ‘ನಮ್ಮ ಭಾಷೆಗೆ ನಾನು ಪ್ರಾಣ ಕೊಡೋಕೂ ಸಿದ್ಧನಿದ್ದೇನೆ. ನನಗೆ 59 ವರ್ಷ ಆಯ್ತು. 60 ವರ್ಷ ನನ್ನನ್ನು ಬೆಳೆಸಿದ್ದೀರಿ. ಈಗ ಭಾಷೆಗಾಗಿಯೇ ಪ್ರಾಣ ಹೋಗಬೇಕು ಎಂದರೆ ಹೋಗಲಿ ಬಿಡಿ’ ಎಂದು ಶಿವಣ್ಣ ಹೆಳಿದ್ದರು. ಶಿವರಾಜ್ಕುಮಾರ್ ಮಾತಿಗೆ ‘ಲವ್ ಯೂ ರಚ್ಚು’ ಸಿನಿಮಾದ ಹೀರೋ ಅಜಯ್ ರಾವ್ ಮಾತನಾಡಿದ್ದಾರೆ. ‘ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಹೊರತಾಗಿ ಬೇರೆ ಯಾವುದಾದರೂ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಬಂದರೆ ಅದಕ್ಕೆ ಚಿತ್ರರಂಗ ಸಿದ್ಧವಿದೆ. ಶಿವಣ್ಣನ ಅವರು ಹೇಳಿದಂತೆ ಪ್ರಾಣ ಹೋದರೂ ಚಿಂತೆ ಇಲ್ಲ, ನಾವು ಹೋರಾಟ ಮಾಡ್ತೀವಿ’ ಎಂದಿದ್ದಾರೆ ಅವರು.
ಇದನ್ನೂ ಓದಿ: Ajay Rao: ಕಾರು ಅಪಘಾತಕ್ಕೆ ಒಳಗಾದವರಿಗೆ ಹೆದ್ದಾರಿಯಲ್ಲಿ ನಟ ಅಜಯ್ ರಾವ್ ಸಹಾಯ
Published on: Dec 22, 2021 07:00 AM
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

