ಹೈಕಮಾಂಡ್​ಗೆ ಕಳಿಸಿದ ಪಟ್ಟಿಯಲ್ಲಿ ಅಜ್ಜಂಪೀರ್ ಖಾದ್ರಿ ಹೆಸರು ಮೊದಲ ಸ್ಥಾನದಲ್ಲಿತ್ತು: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 04, 2024 | 7:38 PM

ಸಿದ್ದರಾಮಯ್ಯ ಭಾಷಣ ಅರಂಭಿಸಿದಾಗ ಜನರ ಗುಂಪೊಂದು ಇದ್ದಕ್ಕಿದ್ದಂತೆ ಗಲಾಟೆ ಮಾಡಲು ಪ್ರಾರಂಭಿಸಿತು. ಸಿದ್ದರಾಮಯ್ಯ ತಮ್ಮ ಎಂದಿನ ಶೈಲಿಯಲ್ಲಿ ಏಯ್ ಸುಮ್ನೆ ಕೂತ್ಕೊಳ್ರಯ್ಯ ಅಂತ ಹೇಳಿ ತಮ್ಮ ಭಾಷಣ ಮುಂದುವರಿಸಿದರು. ಶಿಗ್ಗಾವಿಯಲ್ಲ್ಲಿ ಅವರು ಮತಬೇಟೆ ನಡೆಸಿದರೆ, ಬಿಜೆಪಿ ನಾಯಕ ಪ್ರತಾಪ್ ಸಿಂಹ ರೈತರ ಪರ ಪ್ರತಿಭಟನೆ ನಡೆಸಿದರು.

ಹಾವೇರಿ: ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಪರ ಪ್ರಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿನ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್​ಗೆ ಕಳಿಸಿದಾಗ ಅದರಲ್ಲಿ ಮೊದಲ ಹೆಸರು ಅಜ್ಜಂಪೀರ್ ಖಾದ್ರಿ ಮತ್ತು ಎರಡನೇ ಹೆಸರು ಪಠಾಣ್ ಅವರದಾಗಿತ್ತು. ಇವರಿಬ್ಬರ ಜೊತೆ ಬೇರೆ ಆಕಾಂಕ್ಷಿಗಳ ಹೆಸರು ಸಹ ಇತ್ತಾದರೂ ವರಿಷ್ಠರು ಪಠಾಣ್​ಗೆ ಟಿಕೆಟ್ ನೀಡಿದ್ದಾರೆಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಿಗ್ಗಾಂವಿ: ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್, ಆಮೇಲೇನಾಯ್ತು ನೋಡಿ

Published on: Nov 04, 2024 05:13 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.