ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ

Edited By:

Updated on: May 21, 2025 | 9:40 AM

ಧರ್ಮಸ್ಥಳದ ಬೊಳಿಯೂರು ನಿವಾಸಿಯಾ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ ಸ್ವಗೃಹಕ್ಕೆ ತರಲಾಯಿತು. ಪಂಜಾಬ್​ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಆಕಾಂಕ್ಷಾ ಮೃತದೇಹವನ್ನು ಬೆಂಗಳೂರಿಗೆ ತಂದು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಹುಟ್ಟೂರಿಗೆ ತರಲಾಯಿತು. ವಿಡಿಯೋ ಇಲ್ಲಿದೆ.

ಮಂಗಳೂರು, ಮೇ 21: ಪಂಜಾಬ್​​ನನಲ್ಲಿ ನಿಗೂಢವಾಗಿ ಮೃತಪಟ್ಟ ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹ ತರಲಾಯಿತು. ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು. ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More