Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?

Kiran Surya
| Updated By: Digi Tech Desk

Updated on:Mar 20, 2025 | 4:58 PM

ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇದಕ್ಕೂ ಮುನ್ನ ಕನ್ನಡ ಒಕ್ಕೂಟದಿಂದ ರಾಜಭವನ ಮುತ್ತಿಗೆ, ಬೆಳಗಾವಿ ಚಲೋ, ಮೇಕೆದಾಟು ಯೋಜನೆಗಾಗಿ ಅತ್ತಿಬೆಲೆ ಗಡಿ ಬಂದ್, ಮಂಡ್ಯ, ಮೈಸೂರು, ರಾಮನಗರ ಜಿಲ್ಲಾಡಳಿತ ಮುತ್ತಿಗೆ ಮತ್ತು ಹೊಸಕೋಟೆ ಟೋಲ್ ಬಂದ್‌ ಯೋಜಿಸಲಾಗಿದೆ. ವಾಟಾಳ್ ನಾಗರಾಜ್ ಬಂದ್‌ಗೆ ಕರೆ ನೀಡಿದ್ದಾರೆ.

ಬೆಂಗಳೂರು, ಫೆಬ್ರವರಿ 28: ಕೆಎಸ್​​ಆರ್​​​ಟಿಸಿ ಬಸ್ ನಿರ್ವಾಹಕ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ (Bandh) ಕರೆ ನೀಡಲಾಗಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ  ಹೋರಾಟಗಾರ ವಾಟಾಳ್ ನಾಗರಾಜ್, ಮಾ.22ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್. ಮಾರ್ಚ್​ 3ರಂದು ಕನ್ನಡ ಒಕ್ಕೂಟದಿಂದ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.

ಮಾ. 22ರ ಬಂದ್​​ಗೆ ಎಲ್ಲಾ ಆಟೋ ಸಂಘಟನೆಗಳು, ಹೋಟೆಲ್ ಕಾರ್ಮಿಕರು ಮತ್ತು ಎಲ್ಲಾ ಕಾರ್ಮಿಕರು ಬೆಂಬಲವಿದೆ. ನಮ್ಮ ಸಂಘಟನೆಯಿಂದ ಬಂದ್​​ಗೆ ಬೆಂಬಲವಿದೆ ಎಂದು ಭಾರತೀಯರ ಸೇವಾ ಸಮಿತಿ ರಾಜ್ಯಾಧ್ಯಕ್ಷ ಹೂಡಿ ಚಿನ್ನಿ, ಡಾ.ಬಿ.ಆರ್ ಭೀಮ್ ಸೇವಾ ಸಮಿತಿ ಅಧ್ಯಕ್ಷ ಶ್ರೀ ಕಾಂತ್ ರಾವಣ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Feb 28, 2025 03:16 PM