ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ; ಸಂಸತ್​​ನಲ್ಲಿ ಅಮಿತ್ ಶಾ ಘೋಷಣೆ

Updated on: Jul 29, 2025 | 12:47 PM

ಗೃಹ ಸಚಿವ ಅಮಿತ್ ಶಾ ಮಂಗಳವಾರ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಚರ್ಚೆಯ ಸಂದರ್ಭದಲ್ಲಿ ಒಂದು ದೊಡ್ಡ ಘೋಷಣೆ ಮಾಡಿದ್ದಾರೆ. ಏಪ್ರಿಲ್‌ನಲ್ಲಿ ಪಹಲ್ಗಾಮ್ ದಾಳಿಯಲ್ಲಿ 26 ಜನರನ್ನು ಕೊಂದ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಜುಲೈ 28ರಂದು ಆಪರೇಷನ್ ಮಹಾದೇವ್‌ನಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ನವದೆಹಲಿ, ಜುಲೈ 29: ಇಂದು ಲೋಕಸಭಾ ಅಧಿವೇಶನದಲ್ಲಿ (Lok Sabha Session) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಅಂದರೆ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ. ಅದೇ ದಿನ ಸಂಜೆ ನಾನು ಶ್ರೀನಗರ ತಲುಪಿದೆ. ಆ ಸಂಜೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ ಭಯೋತ್ಪಾದಕರು ದೇಶ ಬಿಟ್ಟು ಪಲಾಯನ ಮಾಡಲು ಬಿಡಬಾರದು ಎಂದು ನಿರ್ಧರಿಸಲಾಯಿತು. ಅದರಿಂದ ಆರಂಭವಾಗಿದ್ದೇ ಆಪರೇಷನ್ ಮಹಾದೇವ್ ಕಾರ್ಯಾಚರಣೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

ನಿನ್ನೆ ಎನ್​ಕೌಂಟರ್​​​ನಲ್ಲಿ ಮೃತನಾದ ಸುಲೇಮಾನ್ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ. ಇನ್ನಿಬ್ಬರು ಅಫ್ಘಾನ್ ಮತ್ತು ಜಿಬ್ರಾನ್ ಆತನ ಸಹಚರರಾಗಿದ್ದರು. ಇವರೆಲ್ಲರೂ ಪಾಕ್ ಮೂಲದ ನಿಷೇಧಿತ ಗುಂಪು ಲಷ್ಕರ್-ಎ-ತೈಬಾಗೆ ಸೇರಿದ ಪ್ರಮುಖ ಭಯೋತ್ಪಾದಕರು. ಪಹಲ್ಗಾಮ್ ದಾಳಿಯಲ್ಲಿ ಇವರದ್ದೇ ಕೈವಾಡವಿತ್ತು. 26 ಜನರನ್ನು ಕೊಂದವರನ್ನು ಹತ್ಯೆ ಮಾಡಲಾಗಿದೆ ಎಂದು ಅಮಿತ್ ಶಾ ಸದನಕ್ಕೆ ತಿಳಿಸಿದ್ದಾರೆ.

Published on: Jul 29, 2025 12:44 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More