My India My Life Goals; ಮಿಷನ್ ಲೈಫ್ ನೊಂದಿಗೆ ಹೆಜ್ಜೆ ಹಾಕುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ: ಜಿ ಕಿಶನ್ ರೆಡ್ಡಿ. ಕೇಂದ್ರ ಸಚಿವ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Jul 24, 2023 | 3:57 PM

ನಮ್ಮ ದಿನನಿತ್ಯದ ಚಟುವಟಿಕೆಗಳ ಹೊರತಾಗಿಯೂ ಪರಿಸರದ ಕಡೆ ಗಮನ ಹರಿಸಿ ಅದನ್ನು ಸಂರಕ್ಷಿಸುವೆಡೆ ಧ್ಯಾನ ಹರಿಸೋಣ ಎಂದು ಸಚಿವ ಕಿಶನ್ ರೆಡ್ಡಿ ಮನವಿ ಮಾಡಿಕೊಳ್ಳುತ್ತಾರೆ.

ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿಯವರು (G Kishan Reddy) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನೀಡಿರುವ ಮಿಷನ್ ಲೈಫ್ (Mission Life) ಅಭಿಯಾನದ ಬಗ್ಗೆ ಒಂದು ಉತ್ತಮ ವಿವರಣೆ ನೀಡಿದ್ದಾರೆ. ಪರಿಸರದೊಡನೆ ಸಹಬಾಳ್ವೆ ನಡೆಸಬೇಕು ಮತ್ತು ಅದನ್ನು ಯಾವತ್ತೂ ಕಡೆಗಣಿಸಬಾರದು, ಅದನ್ನು ಸಂರಕ್ಷಿಸುವುದು ನಮ್ಲೆಲ್ಲರ ಜವಾಬ್ದಾರಿಯಾಗಿರಬೇಕು ಎಂದು ಸಚಿವ ರೆಡ್ಡಿ ಹೇಳುತ್ತಾರೆ. ಪರಿಸರದ ಕಾಳಜಿ ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ, ಪ್ರತಿಯೊಬ್ಬ ವ್ಯಕ್ತಿ ಸರ್ಕಾರ ಮತ್ತು ಸಮಾಜದ ಜೊತೆ ಕೈಜೋಡಿಸಬೇಕು. ಇದೇ ಮಾತನ್ನು ಪ್ರಧಾನಿ ಮೋದಿ ಪ್ರತಿಯೊಬ್ಬ ವ್ಯಕ್ತಿಗೆ ಹೇಳುತ್ತಿದ್ದಾರೆ. ಮಿಷನ್ ಲೈಫ್ ಜೊತೆ ಹೆಜ್ಜೆ ಹಾಕುವುದು ಎಲ್ಲ ಭಾರತೀಯರ ಕರ್ತವ್ಯವಾಗಿದ್ದು ಪ್ರಕೃತಿಯನ್ನು ಆರಾಧಿಸುವ ಪ್ರವೃತ್ತಿ ನಮ್ಮಲ್ಲಿ ಬೆಳೆಯಬೇಕು ಎದು ಸಚಿವರು ಹೇಳುತ್ತಾರೆ. ನಮ್ಮ ದಿನನಿತ್ಯದ ಚಟುವಟಿಕೆಗಳ ಹೊರತಾಗಿಯೂ ಪರಿಸರದ ಕಡೆ ಗಮನ ಹರಿಸಿ ಅದನ್ನು ಸಂರಕ್ಷಿಸುವೆಡೆ ಧ್ಯಾನ ಹರಿಸೋಣ ಎಂದು ಸಚಿವ ಕಿಶನ್ ರೆಡ್ಡಿ ಮನವಿ ಮಾಡಿಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jul 17, 2023 04:01 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.