AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dy CM DK Shivakumar; ಅವಕಾಶ ಎಲ್ಲರಿಗೂ ಸಿಗುತ್ತದೆ, ಶಾಸಕರು ತಾಳ್ಮೆಯಿಂದಿರಬೇಕು: ಡಿಕೆ ಶಿವಕುಮಾರ್

Dy CM DK Shivakumar; ಅವಕಾಶ ಎಲ್ಲರಿಗೂ ಸಿಗುತ್ತದೆ, ಶಾಸಕರು ತಾಳ್ಮೆಯಿಂದಿರಬೇಕು: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 27, 2023 | 1:03 PM

Share

ತಾನು ತಾಳ್ಮೆಯಿಂದ ಇದ್ದ ಹಾಗೆಯೇ, ಈಗಿನ ಅವಕಾಶವಂಚಿತರು ಸಹ ತಾಳ್ಮೆಯಿಂದ ಇರಬೇಕು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಸಚಿವ ಸ್ಥಾನ ಸಿಗದೆ ಹೋಗಿರುವುದಕ್ಕೆ ಕಾಂಗ್ರೆಸ್ ಪಕ್ಷದ ಹಲವಾರಿ ಶಾಸಕರಲ್ಲಿ ಅಸಮಾಧಾನ, ಹತಾಷೆ ಮಡುಗಟ್ಟಿದೆ. ಎಲ್ಲರೂ ತಾಳ್ಮೆಯಿಂದರಬೇಕು ಮುಂದೆ ಎಲ್ಲರಿಗೆ ಅವಕಾಶ ಸಿಗಲಿದೆ ಅಂತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಎಚ್ಚರಿಕೆ ರೂಪದ ಸಲಹೆ ನೀಡಿದರು. ಇಂದು ನೂತನ ಸಚಿವರ ಪದಗ್ರಹಣ (swearing-in ceremony) ಸಮಾರಂಭದಲ್ಲಿ ಭಾಗವಹಿಸಲು ರಾಜಭವನಕ್ಕೆ ಆಗಮಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿಗಳು; ಹಿಂದೆ, ಧರಂ ಸಿಂಗ್ (Dharam Singh) ಅವರ ಅವಧಿ ಮತ್ತು ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿಯಾಗಿದ್ದಾಗ ತನಗೂ ಅವಕಾಶ ಸಿಕ್ಕಿರಲಿಲ್ಲ, ಆಗ ತಾನು ತಾಳ್ಮೆಯಿಂದ ಇದ್ದ ಹಾಗೆಯೇ, ಈಗಿನ ಅವಕಾಶವಂಚಿತರು ಸಹ ತಾಳ್ಮೆಯಿಂದ ಇರಬೇಕು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.