Karnataka Assembly Session: ವಕ್ಫ್ ಇಲಾಖೆಯಿಂದ ಜಾರಿಯಾದ ನೋಟೀಸ್​ಗಳನ್ನು ವಾಪಸ್ಸು ಪಡೀತೇವೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Dec 18, 2024 | 7:55 PM

Karnataka Assembly Session: ವಿಷಯವನ್ನು ಕೆದಕುತ್ತಾ ಹೋದಂತೆ ದೊಡ್ಡದಾಗುತ್ತಾ ಹೋಗುತ್ತದೆ ವಿನಃ ಪರಿಹಾರ ಸಿಗಲ್ಲ, ಶೀವತ್ಸ ಅವರು ಕೇಳಿದ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸುತ್ತಾರೆ, ವಕ್ಫ್ ವಿಷಯದ ಬಗ್ಗೆ ಮಾತಾಡುವುದಾದರೆ, ಯಾರಿಗೆಲ್ಲ ನೋಟೀಸ್​ಗಳನ್ನು ನೀಡಲಾಗಿದೆಯೋ ಅವೆಲ್ಲವನ್ನು ವಾಪಸ್ಸು ಪಡೆಯಲಾಗುವುದು, ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳಿಗೆ ತಾನು ಸೂಚನೆ ನೀಡಿರುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ.

ಬೆಳಗಾವಿ: ವಿಧಾನಸಭಾ ಅಧಿವೇಶನದಲ್ಲಿ ಇವತ್ತು ವಕ್ಫ್ ಇಲಾಖೆಯಿಂದ ರೈತರು, ಮಠಮಾನ್ಯ ಮತ್ತು ದೇವಸ್ಥಾನಗಳಿಗೆ ನೀಡಿರುವ ನೋಟೀಸ್ ಗಳ ಬಗ್ಗೆ ಜೋರು ಚರ್ಚೆ ಆಯಿತು. ಮೈಸೂರು ಬಿಜೆಪಿ ಶಾಸಕ ಟಿಎಸ್ ಶ್ರೀವತ್ಸ, ಮೈಸೂರು ನಗರದ ಮುನೇಶ್ವರ ನಗರದಲ್ಲಿ ಸರ್ವೇ ನಂಬರ್ 153ರಲ್ಲಿರುವ 110 ಸೈಟುಗಳಿಗೆ ದಿನಾಂಕ 20 ಜುಲೈ 2023 ರಲ್ಲಿ ನೀಡಲಾಗಿದೆ ಅಂತ ಹೇಳಿದಾಗ, ಅಗ ಸಿದ್ದರಾಮಯ್ಯ ಸರ್ಕಾರವೇ ಅಧಿಕಾರದಲ್ಲಿತ್ತು ಎಂದು ಉಳಿದ ಬಿಜೆಪಿ ಶಾಸಕರು ಹೇಳುತ್ತಾರೆ. ಜಮೀರ್ ಅಹ್ಮದ್ ಉತ್ತರ ನೀಡಲು ಎದ್ದುನಿಂತು ಮಾತಾಡುತ್ತಾರಾದರೂ ಅವರು ಹೇಳಿದ್ದು ಅರ್ಥವಾಗಲ್ಲ. ಅಗ ಸಿಎಂ ಸಿದ್ದರಾಮಯ್ಯ ಸರ್ಕಾರದ ಪರವಾಗಿ ಉತ್ತರಿಸಲು ಎದ್ದು ನಿಲ್ಲುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಎಐಸಿಸಿ ಅಧಿವೇಶನಕ್ಕೆ ಅಡ್ಡಿಪಡಿಸುವ ಪ್ರಯತ್ನ ಬಿಜೆಪಿ ಮಾಡಿದರೆ ಕಾನೂನುರೀತ್ಯಾ ಕ್ರಮ: ಸಿದ್ದರಾಮಯ್ಯ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.