ಕಾಣೆಯಾದವರಿಗಾಗಿ ಒಂದಾದ ಚಂದನ್ ಶೆಟ್ಟಿ ಹಾಗೂ ಆಲ್ ಓಕೆ
ಚಂದನ್ ಶೆಟ್ಟಿ ಹಾಗೂ ಆಲ್ ಒಕೆ ಇಬ್ಬರೂ ರ್ಯಾಪ್ ಹಾಡಿನ ಮೂಲಕ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡವರು. ಇವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.
ಚಂದನ್ ಶೆಟ್ಟಿ (Chandan Shetty) ಹಾಗೂ ಆಲ್ ಒಕೆ ಇಬ್ಬರೂ ರ್ಯಾಪ್ ಹಾಡಿನ ಮೂಲಕ ಸ್ಯಾಂಡಲ್ವುಡ್ನಲ್ಲಿ (Sandalwood) ಗುರುತಿಸಿಕೊಂಡವರು. ಇವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಇಬ್ಬರೂ ಒಟ್ಟಾಗಿ ಹಾಡು ಹೇಳಿದ್ದಾರೆ. ಹೌದು, ‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಸಿನಿಮಾದ ‘ಬ್ಯಾಂಗ್ ಬ್ಯಾಂಗ್ ಬ್ಯಾಂಕಾಕ್..’ ಹಾಡಿಗೆ ಇಬ್ಬರೂ ದನಿಯಾಗಿದ್ದಾರೆ. ಈ ವಿಚಾರ ಕೇಳಿ ಇಬ್ಬರ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಕಾರಣಕ್ಕೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಇದ್ದ ನಿರೀಕ್ಷೆ ಹೆಚ್ಚಿದೆ. ಪೋಷಕ ಕಲಾವಿದರಾದ ರಂಗಾಯಣ ರಘು, ರವಿಶಂಕರ್, ತಬಲಾ ನಾಣಿ ‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಆಶಿಕಾ ರಂಗನಾಥ್ (Ashika Ranganath) ಸೇರಿದಂತೆ ಇನ್ನೂ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

