AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

ಸುಷ್ಮಾ ಚಕ್ರೆ
|

Updated on:Apr 24, 2025 | 7:00 PM

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಆರಂಭವಾಗಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸಭೆ ನಡೆಯುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ದಾಳಿಯ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಈ ಸಭೆಯ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಅವರು ಮಾಹಿತಿ ನೀಡಲಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಜೆಪಿ ನಡ್ಡಾ ಮತ್ತು ಕಿರಣ್ ರಿಜಿಜು ಅವರು ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಂಸತ್ತಿನಲ್ಲಿ ಸರ್ವಪಕ್ಷ ಸಭೆಗೆ ತೆರಳುತ್ತಿರುವುದನ್ನು ಚಿತ್ರಿಸಲಾಗಿದೆ.

ನವದೆಹಲಿ, ಏಪ್ರಿಲ್ 24: ಕಾಶ್ಮೀರದ ಪಹಲ್ಗಾಮ್​ನಲ್ಲಿ (Pahalgam Attack) ನಡೆದ ಉಗ್ರರ ದಾಳಿಯಿಂದ 26 ಜನರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಕರೆದಿದೆ. ಈಗಾಗಲೇ ಸಂಸತ್ ಭವನದ ಸಂಕೀರ್ಣದಲ್ಲಿ ಎಲ್ಲ ಪಕ್ಷಗಳ ನಾಯಕರ ಸಭೆ ಆರಂಭವಾಗಿದೆ. ಈ ಸಭೆಗೂ ಮುನ್ನ 1 ನಿಮಿಷ ಮೌನ ಆಚರಿಸುವ ಮೂಲಕ ಕಾಶ್ಮೀರದ ಭಯೋತ್ಪಾದನಾ ದಾಳಿಯಲ್ಲಿ ಮಡಿದವರಿಗೆ ನಮನ ಸಲ್ಲಿಸಲಾಯಿತು. ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಡಿಎಂಕೆಯ ತಿರುಚಿ ಶಿವ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಸೇರಿದಂತೆ ಹಲವು ನಾಯಕರು ಸರ್ವಪಕ್ಷ ಸಭೆಗೆ ಆಗಮಿಸಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 24, 2025 06:59 PM