AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಯಮ್ ಮಿಷನ್ ಭಾಗವಾಗಿ ಇಂದು ಬಾಹ್ಯಾಕಾಶಕ್ಕೆ ಹಾರಲಿದ್ದಾರೆ ಭಾರತದ ಹೆಮ್ಮೆಯ ಗಗನಯಾತ್ರಿ ಶುಭಾಂಶು ಶುಕ್ಲಾ

ಆಕ್ಸಿಯಮ್ ಮಿಷನ್ ಭಾಗವಾಗಿ ಇಂದು ಬಾಹ್ಯಾಕಾಶಕ್ಕೆ ಹಾರಲಿದ್ದಾರೆ ಭಾರತದ ಹೆಮ್ಮೆಯ ಗಗನಯಾತ್ರಿ ಶುಭಾಂಶು ಶುಕ್ಲಾ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 25, 2025 | 11:44 AM

Share

ಗಗನಯಾನ ಭಾರತಕ್ಕೆ ಹೊಸದೇನೂ ಅಲ್ಲ. ಹಿಂದೆ 1984 ರಲ್ಲಿ ಒಂದು ಮಿಷನ್​ನೊಂದಿಗೆ ವಿಂಗ್ ಕಮಾಂಡರ್ ರಾಕೇಶ್ ಶರ್ಮ ಬಾಹ್ಯಾಕಾಶಕ್ಕೆ ಹೋಗಿದ್ದರು. ಆಗ ಭಾರತದ ಪ್ರಧಾನ ಮಂತ್ರಿಯಾಗಿದ್ದ ಇಂದಿರಾ ಗಾಂಧಿ ಅಂತರಿಕ್ಷದಲ್ಲಿದ್ದ ಶರ್ಮಾರೊಂದಿಗೆ ಮಾತಾಡಿ ಅಲ್ಲಿಂದ ಭಾರತ ಹೇಗೆ ಕಾಣುತ್ತಿದೆ ಅಂತ ಕೇಳಿದ್ದರು. ರಾಕೇಶ್ ಶರ್ಮಾ ಕೊಟ್ಟ ಉತ್ತರ ಭಾರತೀಯರ ಮೈ ನವಿರೇಳುವಂತೆ ಮಾಡಿತ್ತು: ‘ಸಾರಾ ಜಹಾಂಸೇ ಅಚ್ಛಾ ಹಿಂದೂಸ್ತಾನ್ ಹಮಾರಾ.....’

ಬೆಂಗಳೂರು, ಜೂನ್ 25: ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ಸಂಶೋಧನೆ ಕಾರ್ಯಕ್ರಮಗಳ ಇತಿಹಾಸದಲ್ಲಿ ಇವತ್ತು ಒಂದು ಹೊಸ ಮೈಲಿಗಲ್ಲು. 39-ವರ್ಷ ವಯಸ್ಸಿನ ಭಾರತದ ಶುಭಾಂಶು ಶುಕ್ಲಾ ಸ್ಪೇಸ್ ಎಕ್ಸ್ ಫಾಲ್ಕನ್-9 ಸ್ಪೇಸ್ ಶಟಲ್ ಅನ್ನು ಇಂದು ಮಧ್ಯಾಹ್ನ 12:01ಕ್ಕೆ ಅಮೇರಿಕದ ಫ್ಲೋರಿಡಾದಲ್ಲಿರುವ ಕೆನಡಿ ಅಂತರಿಕ್ಷ ಕೇಂದ್ರದಿಂದ ಬಾಹ್ಯಾಕಾಶಕ್ಕೆ  (Kennedy Space Centre) ಹಾರಿಸಲಿದ್ದಾರೆ. ಇಸ್ರೋ ಗಗನಯಾತ್ರಿ ಆಗಿರುವ ಶುಕ್ಲಾ ಅವರೊಂದಿಗೆ ಅಮೆರಿಕ, ಹಂಗರಿ ಮತ್ತು ಪೋಲೆಂಡ್​ನ ಗಗನಯಾತ್ರಿಗಳೂ ಅಂತರಿಕ್ಷಕ್ಕೆ ಹಾರಲಿದ್ದಾರೆ. ಆಕ್ಸಿಯಮ್ ಮಿಷನ್ ನ ವಿಶೇಷತೆ ಎಂದರೆ ಗಗನಯಾತ್ರಿಗಳು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದು ಅಧ್ಯಯನಗಳನ್ನು ನಡೆಸಲಿದ್ದಾರೆ. ಶುಕ್ಲಾ ಅವರು 7 ಪ್ರಯೋಗಗಳನ್ನು ಅಲ್ಲಿ ನಡೆಸಲಿದ್ದು ತಮ್ಮೊಂದಿಗೆ ಕೆಲವು ಕಾಳುಗಳನ್ನು ಒಯ್ಯಲಿದ್ದಾರೆ. ಅಂತರಿಕ್ಷದಲ್ಲಿ ಅವು ಮೊಳಕೆಯೊಡುವುದನ್ನು ಅವರು ಗಮನಿಸಲಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ ಸ್ಪೇಸ್ ಎಕ್ಸ್ ಫಾಲ್ಕನ್-9 ಸ್ಪೇಸ್ ಶಟಲ್ ಜೂನ್ 26, ಸಂಜೆ 4.30 ಗಂಟೆಗೆ ಐಎಸ್​ಎಸ್ ನಲ್ಲಿ ಡಾಕಿಂಗ್ ಆಗಲಿದೆ. ಸ್ಪೇಸ್ ಎಕ್ಸ್ ಫಾಲ್ಕನ್-9 ಸ್ಪೇಸ್ ಶಟಲ್ ಲಾಂಚ್​ ಅನ್ನು ನಮ್ಮ ವಾಹಿನಿಯಲ್ಲಿ ಲೈವ್ ವೀಕ್ಷಿಸಬಹುದು.

ಇದನ್ನೂ ಓದಿ:  Shubhanshu Shukla: 4 ದಶಕಗಳ ಬಳಿಕ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿರುವ ಮೊದಲ ಭಾರತೀಯ ಶುಭಾಂಶು ಶುಕ್ಲ; ಸಂಪೂರ್ಣ ಮಾಹಿತಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More