ಹೆಣ್ಣಿನ ಕಾರಣದಿಂದಲೇ ಇಷ್ಟೆಲ್ಲಾ ಸಂಕಷ್ಟ: ವಿನಯ್ ಕುಲಕರ್ಣಿಗೆ ದೈವ ನೀಡಿದ ಸೂಚನೆ ಏನು?
ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸದ್ಯ ಕೊರಗಜ್ಜ ದೈವದ ಮೊರೆ ಹೋಗಿದ್ದಾರೆ. 48 ದಿನಗಳ ಒಳಗೆ ಧಾರವಾಡ ಕ್ಷೇತ್ರ ಪ್ರವೇಶ ನಿರ್ಬಂಧ ತೆರವಿನ ಬಗ್ಗೆ ಕೊರಗಜ್ಜ ಅಭಯ ನೀಡಿದೆ. ಜೊತೆಗೆ ಇನ್ನು ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿ ಇರುವಂತೆ ದೈವದ ಸೂಚನೆ ನೀಡಲಾಗಿದೆ.
ಮಂಗಳೂರು, ಜುಲೈ 27: ಕೊರಗಜ್ಜನ ಬಳಿ ಸಂಕಷ್ಟದ ಬಗ್ಗೆ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅರಿಕೆ ಮಾಡಿಕೊಂಡಿದ್ದರು. ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧದ ತೀರ್ಪಿನ ಬಗ್ಗೆ ಪ್ರಸ್ತಾಪ್ಪಿಸಿದ್ದರು. ಇದಕ್ಕೆ ಪ್ರತಿಯಾಗಿ ದೈವ ನುಡಿದಿದ್ದು, 48 ದಿನಗಳ ಒಳಗೆ ಧಾರವಾಡ ಕ್ಷೇತ್ರ ಪ್ರವೇಶ ನಿರ್ಬಂಧ ತೆರವಿನ ಬಗ್ಗೆ ಕೊರಗಜ್ಜ ಅಭಯ ನೀಡಿದೆ. ಜೊತೆಗೆ ಇನ್ನು ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿ ಇರುವಂತೆ ದೈವದ ಸೂಚನೆ ನೀಡಲಾಗಿದೆ. ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎದುರಾಗಿದೆ. ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ಳುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿದಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
