ಲ್ಯಾಪ್​ಟಾಪ್ ವಿತರಣೆಯಲ್ಲಿ ತಾರತಮ್ಯ ಆರೋಪ; ಶಾಸಕರ ಎದುರೇ ಅಧಿಕಾರಿಗಳಿಗೆ ಪೋಷಕರಿಂದ ತರಾಟೆ

Edited By:

Updated on: Jul 10, 2024 | 7:18 PM

ಕಾರ್ಮಿಕ‌ ಇಲಾಖೆ ವತಿಯಿಂದ ಕಟ್ಟಡ‌ ಕಾರ್ಮಿಕರ ಮಕ್ಕಳಿಗೆ ಇರುವ ಶೈಕ್ಷಣಿಕ ಸೌಲಭ್ಯದ ಯೋಜನೆಯಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​​ ವಿತರಣೆ ಕಾರ್ಯಕ್ರಮವನ್ನು ಮುಂಡರಗಿ(Mundaragi) ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲ್ಯಾಪ್​ಟಾಪ್(laptop) ವಿತರಣೆಯಲ್ಲಿ ತಾರತಮ್ಯ ಹಿನ್ನಲೆ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು.

ಗದಗ, ಜು.10: ಜಿಲ್ಲೆಯ ಮುಂಡರಗಿ(Mundaragi) ಪಟ್ಟಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​​ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲ್ಯಾಪ್​ಟಾಪ್(laptop) ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನೆಲೆ ಶಾಸಕ ಚಂದ್ರು‌ ಲಮಾಣಿ ಎದುರೇ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು. 10 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್​ಟಾಪ್ ವಿತರಣೆ ಮಾಡಲಾಗಿತ್ತು. ಓರ್ವ ವಿದ್ಯಾರ್ಥಿನಿಗೆ ಲ್ಯಾಪ್​ಟಾಪ್​ ಸಿಗದ ಹಿನ್ನೆಲೆ ಪೋಷಕರು ಕೋಪಗೊಂಡಿದ್ದಾರೆ. ಕಾರ್ಮಿಕ‌ ಇಲಾಖೆ ವತಿಯಿಂದ ಕಟ್ಟಡ‌ ಕಾರ್ಮಿಕರ ಮಕ್ಕಳಿಗೆ ಇರುವ ಶೈಕ್ಷಣಿಕ ಸೌಲಭ್ಯದ ಯೋಜನೆ ಇದಾಗಿದ್ದು, ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಒಟ್ಟು 10 ವಿದ್ಯಾರ್ಥಿಗಳ ಫೈಕಿ ವಿದ್ಯಾರ್ಥಿನಿ ಸಿಮ್ರಾನ್​ಗೆ ಕೈಬಿಡಲಾಗಿದೆ. ಪಟ್ಟಿಯಲ್ಲಿ ಆಯ್ಕೆಯಾಗಿದ್ದರೂ ವಿದ್ಯಾರ್ಥಿನಿಗೆ ಲ್ಯಾಪ್​ಟಾಪ್ ನೀಡದ ಹಿನ್ನೆಲೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More