AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಣ್ಣ ಮಾಡಿರುವ ಹನಿ ಟ್ರ್ಯಾಪ್ ಆರೋಪ ಬಹಳ ಸೂಕ್ಷ್ಮ, ಆಫ್ ದಿ ಕಫ್ ಪ್ರತಿಕ್ರಿಯೆ ನೀಡಲ್ಲ: ಪರಮೇಶ್ವರ್

ರಾಜಣ್ಣ ಮಾಡಿರುವ ಹನಿ ಟ್ರ್ಯಾಪ್ ಆರೋಪ ಬಹಳ ಸೂಕ್ಷ್ಮ, ಆಫ್ ದಿ ಕಫ್ ಪ್ರತಿಕ್ರಿಯೆ ನೀಡಲ್ಲ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 22, 2025 | 11:39 AM

Share

ಸಚಿವ ರಾಜಣ್ಣ ನಿನ್ನೆ ಸದನದಲ್ಲಿ ತಮ್ಮನ್ನು ಹನಿ ಟ್ರ್ಯಾಪಿಂಗ್​ಗಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಹೇಳಿದ ಬಳಿಕ ಕೋಲಾಹಲ ಸೃಷ್ಟಿಯಾಯಿತು. ಪ್ರಕರಣದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಬೇಕೆಂದು ಬಿಜೆಪಿಯ ಶಾಸಕರು ಗಲಾಟೆ ಶುರುಮಾಡಿ ಸದನದ ಬಾವಿಗಿಳಿದು ಸ್ಪೀಕರ್ ಮೇಲೆ ಪೇಪರ್​ಗಳನ್ನು ಎಸೆದ ಕಾರಣ 18 ಶಾಸಕರನ್ನು ಸಸ್ಪೆಂಡ್ ಮಾಡಲಾಯಿತು.

ಬೆಂಗಳೂರು, 22 ಮಾರ್ಚ್: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್, ಸಹಕಾರ ಸಚಿ ಕೆಎನ್ ರಾಜಣ್ಣ (KN Rajanna) ಮಾಡಿರುವ ಹನಿ ಟ್ರ್ಯಾಪಿಂಗ್ ಅರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇದು ಬಹಳ ಸೂಕ್ಷ್ಮ ವಿಷಯ ಅಗಿರುವುದರಿಂದ ಆಫ್ ದಿ ಕಫ್ ಉತ್ತರ ನೀಡಲು ಆಗಲ್ಲ ಎಂದು ಅವರು ಹೇಳಿದರು. ರಾಜಣ್ಣ ತನ್ನನ್ನು ಭೇಟಿಯಾಗಲಿರುವ ಬಗ್ಗೆ ಕೇಳಿದ ಪ್ರಶ್ನೆಗೂ ಉತ್ತರ ನೀಡದ ಪರಮೇಶ್ವರ್ ಸರಸರ ಕಾರುಹತ್ತಿ ಅಲ್ಲಿಂದ ಹೊರಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:      ಶಿವಕುಮಾರ್ ಆಯೋಜಿಸಿದ್ದ ಡಿನ್ನರ್ ಪಾರ್ಟಿಯಲ್ಲಿ ಪರಮೇಶ್ವರ್ ಬಿಟ್ಟು ಎಲ್ಲರೂ ಭಾಗಿಯಾಗಿದ್ದರು: ಎಂಬಿ ಪಾಟೀಲ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.